ಚಿದಾನಂದ ಸಾಲಿ, ಶ್ರೀದೇವಿ ಕೆರೆಮನೆಗೆ ‘ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’

Date: 19-09-2020

Location: ಬೆಂಗಳೂರು


ಯುವ ಸಾಹಿತಿಗಳಿಗೆ ನೀಡುವ 'ಶ್ರೀವಿಜಯ ಸಾಹಿತ್ಯ ಪ್ರಶಸ್ತಿ'ಗೆ ಸಾಹಿತಿ ಚಿದಾನಂದ ಸಾಲಿ ಹಾಗೂ ಕವಿಯತ್ರಿ ಶ್ರೀದೇವಿ ಕೆರೆಮನೆ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಮೃದ್ಧವಾದ ಮತ್ತು ಮೌಲಿಕವಾಗಿ ಕೊಡುಗೆ ನೀಡಿದ 45 ವರ್ಷದೊಳಗಿನ ಯುವ ಸಾಹಿತಿಗಳಿಗೆ ಈ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಾ ಬಂದಿದ್ದು ಪ್ರಶಸ್ತಿಯು ತಲಾ 60 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯ ಆಯ್ಕೆ ಸಮಿತಿ ಸಭೆಯಲ್ಲಿ ಕರಿಯಪ್ಪ, ರಾಜಶೇಖರ ಹತಗುಂದಿ, ವ. ಚ. ಚನ್ನೇಗೌಡ ಹಾಗೂ ಪದ್ಮರಾಜ ದಂಡಾವತಿ ಇದ್ದರು.

MORE NEWS

ಸಾಹಿತ್ಯ ಕೃತಿಗಳು ಸಮಾಜದ ಹಲವು ಮುಖಗಳನ್ನು ತೋರಿಸುವ ಶಕ್ತಿ ಪಡೆದಿವೆ; ದೀಪಾ ಭಾಸ್ತಿ

13-12-2025 ಬೆಂಗಳೂರು

ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...

2026ನೇ ಸಾಲಿನ ಟೊಟೊ ಪುರಸ್ಕಾರದ ಮೊದಲನೇ ಪಟ್ಟಿ ಬಿಡುಗಡೆ

12-12-2025 ಬೆಂಗಳೂರು

2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...

ಮಕ್ಕಳಲ್ಲಿ ಕಲ್ಪನಾ ಲೋಕ ಬೆಳೆಸಿ: ಬಸು ಬೇವಿನಗಿಡದ

10-12-2025 ಧಾರವಾಡ

ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...