Date: 01-12-2023
Location: ಬೆಂಗಳೂರು
ಮೈಸೂರು: ಜಗದ್ಗುರು ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯ 2022ನೇ ಸಾಲಿನ 'ಶ್ರೀ ಶಿವರಾತ್ರೀಶ್ವರ ಪ್ರಶಸ್ತಿ'ಗೆ ಲೇಖಕಿ ಡಾ. ಎಚ್.ಎಸ್. ಅನುಪಮಾ ಅವರ ‘ಬೆಳಗಿನೊಳಗು ಮಹಾದೇವಿಯಕ್ಕ’ ಕಾದಂಬರಿ ಆಯ್ಕೆಯಾಗಿದೆ.
ಜಗದ್ಗುರು ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯಿಂದ ಸಾಹಿತ್ಯ, ಧರ್ಮ, ಕಲೆ, ಸಂಸ್ಕೃತಿ ಕುರಿತಂತೆ ಪ್ರಕಟವಾಗುವ ಉತ್ತಮ ಕೃತಿಗೆ ಪ್ರತಿವರ್ಷವೂ ಶ್ರೀಶಿವರಾತ್ರೀಶ್ವರ ಪ್ರಶಸ್ತಿ ನೀಡಲಾಗುತ್ತಿದೆ. 1983ರಲ್ಲಿ ಪ್ರಾರಂಭವಾದ ಈ ಪ್ರಶಸ್ತಿಯನ್ನು ಈವರೆಗೂ 34 ಕೃತಿಗಳಿಗೆ ನೀಡಲಾಗಿದೆ. ಪುರಸ್ಕೃತರಿಗೆ ಪ್ರಶಸ್ತಿ ಫಲಕ, ಸ್ವಸ್ತಿ ವಾಚನ, ಫಲತಾಂಬೂಲ ಹಾಗೂ 25 ಸಾವಿರ ರೂ.ಗಳ ಗೌರವಧನವನ್ನು ಸಮಾರಂಭದಲ್ಲಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...
2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...
ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...
©2025 Book Brahma Private Limited.