‘ಈ ಹೊತ್ತಿಗೆ’ ೧೨ನೇ ವಾರ್ಷಿಕೋತ್ಸವ ‘ಹೊನಲು’ ಮಾರ್ಚ್ ೯ರಂದು ಬೆಂಗಳೂರಿನಲ್ಲಿ

Date: 07-03-2025

Location: ಬೆಂಗಳೂರು


ಬೆಂಗಳೂರು: ‘ಈ ಹೊತ್ತಿಗೆ’ ಮಾಸಪತ್ರಿಕೆಯ ೧೨ನೇ ವಾರ್ಷಿಕೋತ್ಸವ ‘ಹೊನಲು’ ಕಾರ್ಯಕ್ರಮ ಜೆ ಪಿ ನಗರದಲ್ಲಿರುವ ಕಪ್ಪಣ್ಣ ಅಂಗಳದಲ್ಲಿ ಮಾರ್ಚ್ ೯, ಭಾನುವಾರ ಬೆಳಗ್ಗೆ ೧೦ ಗಂಟೆಗೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ೨೦೨೫ನೇ ಸಾಲಿನ ‘ಈ ಹೊತ್ತಿಗೆ’ ಕಥಾಪ್ರಶಸ್ತಿ ಹಾಗೂ ‘ಈ ಹೊತ್ತಿಗೆ’ ಕಾವ್ಯಪ್ರಶಸ್ತಿ ಪ್ರದಾನ ನಡೆಯಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದರಾಜ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ವರ್ಷದ ಕಾವ್ಯ ಪ್ರಶಸ್ತಿಗೆ ಡಾ. ಲಕ್ಷ್ಮಣ ವಿ.ಎ., ಮತ್ತು ಕಥಾಪ್ರಶಸ್ತಿಗೆ ಪೂರ್ಣಿಮಾ ಭಟ್ಟ ಸಣ್ಣಕೇರಿ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಶಸ್ತಿ ವಿಜೇತ ಕೃತಿಗಳ ಲೋಕಾರ್ಪಣೆ ನಡೆಯಲಿದ್ದು, ಕೃತಿ ಪರಿಚಯವನ್ನು ಆನಂದ ಕುಂಚನೂರ್ ಮತ್ತು ಸಂಗೀತಾ ಚಚಡಿ ಮಾಡಲಿದ್ದಾರೆ.

ಕಾರ್ಯಕ್ರಮದ ಮತ್ತೊಂದು ಮುಖ್ಯ ಆಕರ್ಷಣೆಯಾಗಿ ‘ಅಕ್ಷರ ಜಾನಪದ’ ಗೋಷ್ಠಿ ನಡೆಯಲಿದ್ದು, ಖ್ಯಾತ ಗಾಯಕರಾದ ಜನಪದಶ್ರೀ ಅಪ್ಪಗೆರೆ ತಿಮ್ಮರಾಜು ಮತ್ತು ಜಾನಪದ ತಜ್ಞೆ, ಕವಿ ರೇಣುಕಾ ಕೋಡಗುಂಟಿ ಅವರು ಜಾನಪದ ಸಾಹಿತ್ಯದ ಬಗ್ಗೆ ಮಾತನಾಡಲಿದ್ದಾರೆ. ಈ ಗೋಷ್ಠಿಗೆ ಖ್ಯಾತ ಕತೆಗಾರ್ತಿ, ಕಾದಂಬರಿಗಾರ್ತಿ ಜಯಶ್ರೀ ದೇಶಪಾಂಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಹಾಗೂ, ‘AI ಮತ್ತು ಸಾಹಿತ್ಯ’ ವಿಷಯದ ಮೇಲೆ ಸಂವಾದವೂ ನಡೆಯಲಿದ್ದು, ತಂತ್ರಜ್ಞಾನ ಪರಿಣಿತರು ಹಾಗೂ ಲೇಖಕರಾದ ಮಧುಸೂದನ ವೈ.ಎನ್. ಮತ್ತು ಪತ್ರಕರ್ತೆ ಶ್ರೀದೇವಿ ಡಿ.ಎನ್. (ಶ್ರೀ ಡಿ.ಎನ್.) ಈ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ಈ ವರ್ಷದ ಪ್ರಶಸ್ತಿಗಳ ತೀರ್ಪುಗಾರರಾಗಿ ಖ್ಯಾತ ಕತೆಗಾರ, ಪತ್ರಕರ್ತ ರಘುನಾಥ ಚ.ಹ., ಖ್ಯಾತ ಕವಿ, ದೂರದರ್ಶನ ಚಂದನದ ಮುಖ್ಯಸ್ಥೆ ಆರತಿ ಎಚ್.ಎನ್., ಹಾಗೂ ಕತೆಗಾರ, ಚಲನಚಿತ್ರ ನಿರ್ದೇಶಕ ಪ್ರವೀಣ್ ಕುಮಾರ್ ಜಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಈ ಹೊತ್ತಿಗೆಯ ಅಧ್ಯಕ್ಷೆ ಜಯಲಕ್ಷ್ಮಿ ಪಾಟೀಲ್ ಅವರು ನೀಡಲಿದ್ದು, ಇಂದಿರಾ ಶರಣ್ ಕಾರ್ಯಕ್ರಮ ನಿರೂಪಣೆ ನಡೆಸಲಿದ್ದಾರೆ. ಅತಿಥಿಗಳ ಪರಿಚಯವನ್ನು ಸರ್ವಮಂಗಳಾ ಮೋಹನ್ ಮಾಡಲಿದ್ದಾರೆ.

ಕಾರ್ಯಕ್ರಮದ ವಿವರ:
ದಿನಾಂಕ: ಮಾರ್ಚ್ ೯, ೨೦೨೫, ಭಾನುವಾರ
ಸಮಯ: ಬೆಳಗ್ಗೆ ೧೦.೦೦ ರಿಂದ ಮದ್ಯಾಹ್ನ ೦೧.೩೦ರವರೆಗೆ
ಸ್ಥಳ: ಕಪ್ಪಣ್ಣ ಅಂಗಳ, ೧೪೮/೧, ೩೨ನೇ ಎ ಮುಖ್ಯರಸ್ತೆ, ಜೆಪಿ ನಗರ, ೧ನೇ ಹಂತ, ಬೆಂಗಳೂರು.

ಸಾಹಿತ್ಯಾಸಕ್ತರಿಗಾಗಿ ವಿಶೇಷವಾಗಿ ರೂಪುಗೊಂಡ ಈ ಕಾರ್ಯಕ್ರಮ ಎಲ್ಲರಿಗೂ ಮುಕ್ತವಾಗಿದೆ.

 



MORE NEWS

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

04-12-2025 ಬೆಂಗಳೂರು

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ (kannada Pustaka Pradhikara) ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚ...

‘ಹುಡುಗತನ’ ಹಾಗೂ ‘ಹುಡುಗಿತನ’ದ ಪರಿಣಾಮಕಾರಿ ಚಿತ್ರಣ

04-12-2025 ಬೆಂಗಳೂರು

ಮಕ್ಕಳಿಗೆ ದೆವ್ವ, ಭೂತ ಮುಂತಾದ ಸಂಗತಿಗಳನ್ನು ಹೇಳಬಾರದೆಂದು ಹೇಳುತ್ತ ಅವರಲ್ಲಿ ಮತ್ತಷ್ಟು ಹೆದರಿಕೆ ಹುಟ್ಟಿಸಿರುತ್ತೇವೆ...

ಕನ್ನಡದ ಲೇಖಕಿ, ಭಾರತದ ಮೊದಲ ಅನುವಾದಕಿಗೆ ಸಂದ ವಿಶ್ವದ ಅತ್ಯಂತ ಪ್ರಭಾವಶಾಲಿ ಪ್ರಶಸ್ತಿ

21-05-2025 ಬೆಂಗಳೂರು

ಲಂಡನ್: ದಕ್ಷಿಣ ಭಾರತದ ಸಾಹಿತ್ಯ ಲೋಕ, ಅದರಲ್ಲೂ ಕನ್ನಡ ಸಾಹಿತ್ಯದ ಪಾಲಿಗೆ ಮೇ 20, 2025 ಸುವರ್ಣಾಕ್ಷರದಲ್ಲಿ ಬರೆದಿಡಬೇ...