ಗಾಂಧಿ ಶಾಂತಿ ಪ್ರತಿಷ್ಠಾನ- ರಾಜ್ಯ ಮಟ್ಟದ ಕೈ ಬರಹ ಸ್ಪರ್ಧೆ

Date: 03-12-2021

Location: ಬೆಂಗಳೂರು


ಗಾಂಧಿ ಶಾಂತಿ ಪ್ರತಿಷ್ಠಾನವು ಮುಂಬರುವ 2022 ಜನವರಿ 30 ಸರ್ವೋದಯ ದಿನದ ಸಂದರ್ಭದಲ್ಲಿ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ.

ವಿಷಯ: ಅಂದಿಗೂ ಇಂದಿಗೂ ಪ್ರಸ್ತುತ ಗಾಂಧಿ ವಿಚಾರಧಾರೆ ಲೇಖನದ ವಸ್ತುವಾಗಿದ್ದು, ಗಾಂಧಿ ಚಿಂತನೆ ಹಾಗೂ ಇಂದಿನ ಪರಿಸ್ಥಿತಿ ಮತ್ತು ಸವಾಲುಗಳನ್ನು ಕುರಿತು ‘ಗಾಂಧಿಗೆ ಒಂದು ಪತ್ರ’ ಈ ಎರಡು ಕನ್ನಡ ಲೇಖನ ಸ್ಪರ್ಧೆಗಳಲ್ಲಿ 15-30 ವಯೋಮಿತಿಯ ಯುವಜನರು ಮಾತ್ರ ಭಾಗವಹಿಸಬಹುದು.

ನಿಯಮಗಳು: ಪತ್ರ ಲೇಖನದಲ್ಲಿ ಭಾಗವಹಿಸುವ ಸ್ಪರ್ಧಿಗಳು ಕಡ್ಡಾಯವಾಗಿ ಅಂಚೆ ಕಚೇರಿಯಲ್ಲಿ ದೊರಕುವ ಅಂತರ್ದೇಶೀಯ ಪತ್ರ (ಇನ್‍ಲ್ಯಾಂಡ್ ಲೆಟರ್) ದಲ್ಲಿ ತಮ್ಮ ಸ್ವಂತ ಕೈ ಬರಹದಲ್ಲಿ ಬರೆಯಬೇಕು. ಉಳಿದಂತೆ ಲೇಖನ ಸ್ಪರ್ಧಿಗಳು ಎ4 ಅಳತೆಯ ಮೂರು ಪುಟಗಳಿಗೆ ಮೀರದಂತೆ ತಮ್ಮ ಬರಹಗಳನ್ನು ಸೀಮಿತಗೊಳಿಸಬೇಕು.  ದಶಮಾನೋತ್ಸವ ಆಚರಿಸುತ್ತಿರುವ ಗಾಂಧಿ ವಿಚಾರಕ್ಕೆ ಮೀಸಲಾದ ಕನ್ನಡ-ಇಂಗ್ಲಿಷ್ ದ್ವೈಮಾಸಿಕ ‘ಅಮರ ಬಾಪು ಚಿಂತನ’ ಸಹಯೋಗದಲ್ಲಿ ಈ ಸ್ಪರ್ಧೆ ನಡೆಯಲಿದ್ದು ಭಾಗವಹಿಸಿದ ಎಲ್ಲರಿಗ ಇ-ಪ್ರಮಾಣ ಪತ್ರ ನೀಡಲಾಗುವುದು ಮತ್ತು ತೀರ್ಪುಗಾರರು ಆಯ್ಕೆ ಮಾಡಿದ ಲೇಖನಗಳನ್ನು ಅಮರ ಬಾಪು ಚಿಂತನ ಪತ್ರಿಕೆಯಲ್ಲಿ  ಪ್ರಕಟಿಸಲಾಗುವುದು.

ಲೇಖನ/ಪತ್ರಗಳನ್ನು ಕಳಿಸಬೇಕಿರುವ ವಿಳಾಸ: ಅಧ್ಯಕ್ಷರು , ಗಾಂಧಿ  ಶಾಂತಿ ಪ್ರತಿಷ್ಠಾನ , ಗಾಂಧೀಭವನ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001 

ಈ ವಿಳಾಸಕ್ಕೆ ಡಿಸೆಂಬರ್ 31 2021 ರೊಳಗೆ ತಲುಪುವಂತೆ ಕಳುಹಿಸಬೇಕು. ಸ್ಪರ್ಧಿಗಳು ತಮ್ಮ ಜನ್ಮ ದಿನಾಂಕ – ವರ್ಷ ಮತ್ತು ದೂರವಾಣಿ ಸಂಖ್ಯೆ ನಮೂದಿಸುವುದು ಕಡ್ಡಾಯ. 

ಇ-ಮೇಲ್ : editor.abc2020@gmail.com
ವಿವರಗಳಿಗೆ : 90356 18076 / 80880 13083

 

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...