ಹಂಪಿ ಕನ್ನಡ ವಿ.ವಿ ಪ್ರಾಧ್ಯಾಪಕ ವಾಸುದೇವನ್ ನಿಧನ

Date: 27-11-2022

Location: ವಿಜಯನಗರ


ಭೀಕರ ಕಾರು ಅಪಘಾತದಲ್ಲಿ ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್, ಪ್ರಾಧ್ಯಾಪಕ ಪ್ರೊ.ಸಿ.ಎಸ್. ವಾಸುದೇವನ್ ಅವರು ಮೃತಪಟ್ಟಿದ್ದಾರೆ.ಜಗಳೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 50 ಬಸಪ್ಪನಹಟ್ಟಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.

ಶನಿವಾರ ರಾತ್ರಿ ಜಗಳೂರು ಸಮೀಪದ ಹೆದ್ದಾರಿಯಲ್ಲಿ ನಿಂತ ಲಾರಿಗೆ ಇವರ ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತರಾಗಿದ್ದಾರೆ. ಪುರಾತತ್ವ ಹಾಗೂ ಇತಿಹಾಸ ವಿಭಾಗದಲ್ಲಿ ಇವರು ಅನೇಕ ವರ್ಷಗಳವರೆಗೆ ಕೆಲಸ ನಿರ್ವಹಿಸಿದ್ದರು. ಹಂಪಿಗೆ ಯಾರೇ ಗಣ್ಯರು ಬಂದರೆ ಸ್ಮಾರಕಗಳ ಬಗ್ಗೆ ಪರಿಚಯ ಮಾಡಿಕೊಡುತ್ತಿದ್ದರು.

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...