ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

Date: 24-04-2024

Location: ಬೆಂಗಳೂರು


ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ 2024 ಏಪ್ರಿಲ್ 24 ರಂದು ನಿಧನರಾಗಿದ್ದಾರೆ.

ಮೂಲತಃ ಕೋಲಾರ ಜಿಲ್ಲೆ ನರಸಾಪುರ ಹೋಬಳಿ ಚೌಡದೇನಹಳ್ಳಿಯವರಾಗಿದ್ದು ಅವರು, ಪತ್ರಕರ್ತರಾಗಿ ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ, ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದು, ತಮ್ಮ ಬರಹಗಳ ಮೂಲಕ ಜನಪ್ರಿಯರಾಗಿದ್ದರು. ಅವರ ಅಂಕಣ ಬರಹಗಳ ಸಂಕಲನ 'ಬದುಕು ಜಟಕಾಬಂಡಿ' ಜನಮನ್ನಣೆಗಳಿಸಿದೆ.

ಅವರ ಅಂತ್ಯಸಂಸ್ಕಾರವು ಹುಟ್ಟೂರಾದ ಕೋಲಾರ ಜಿಲ್ಲೆ ನರಸಾಪುರ ಹೋಬಳಿ ಚೌಡದೇನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಎನ್.ಅರ್ಜುನದೇವ ಅವರ ಲೇಖಕರ ಪರಿಚಯಕ್ಕಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ

 

MORE NEWS

ನಯನ ರಾಜು ಅವರ ಕಾರ್ಯವೈಖರಿ ಪಕ್ವತೆಯಿಂದ ಕೂಡಿದೆ; ಬರಗೂರು ರಾಮಚಂದ್ರಪ್ಪ

05-05-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ರಂಗ ಪರಿಷತ್ತು ಕೇಂದ್ರ ಸಮಿತಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ರಾಜ...

ಗಂಭೀರವಾದ ಸಾಹಿತ್ಯ ವಿಮರ್ಶೆಗಳ ಸ್ಥಾನಮಾನ ಕನ್ನಡದ ಅಳಿವು ಉಳಿವಿನ ಪ್ರಶ್ನೆಯಾಗಿದೆ; ಬಸವರಾಜ ಕಲ್ಗುಡಿ

05-05-2024 ಬೆಂಗಳೂರು

ಬೆಂಗಳೂರು: ಅಂಕಿತ ಪುಸ್ತಕದ ವತಿಯಿಂದ ಪದ್ಮರಾಜ ದಂಡಾವತಿ ಅವರ ‘ಉಳಿದಾವ ನೆನಪು’ ಪತ್ರಕರ್ತನ ವೃತ್ತಿ ಜೀವನ...

ಕನ್ನಡದ ಹೆಸರಾಂತ ಲೇಖಕ, ಅನುವಾದಕ ಬುಳಸಾಗರ ಪಾಂಡುರಂಗಯ್ಯ ನಿಧನ

05-05-2024 ಬೆಂಗಳೂರು

ಕನ್ನಡದ ಹೆಸರಾಂತ ಲೇಖಕ, ಕತೆಗಾರ, ಅನುವಾದಕ ಬುಳಸಾಗರ ಪಾಂಡುರಂಗಯ್ಯ ಅವರು 2024 ಮೇ 04ರಂದು ದಾವಣಗೆರೆಯಲ್ಲಿ ನಿಧನರಾಗಿದ...