Date: 06-04-2021
Location: ಬೆಂಗಳೂರು
ಹಿರಿಯ ಲೇಖಕಿ ಮುಮ್ತಾಜ್ ಬೇಗಂ(73) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಐದು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಕೋವಿಡ್ ನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.
ಉರ್ದು ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿಗ್ಗ ಅವರು ಕನ್ನಡದಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಪೂರೈಸಿದ್ದರು. ಆನಂತರ ಸಮಾಜಶಾಸ್ತ್ರದಲ್ಲಿ ಬಿ.ಎ ಪದವಿ ಹಾಗೂ ಬಿ.ಎಡ್. ಪದವೀಧರಾಗಿದ್ದರು. ಪ್ರಜಾವಾಣಿ ಬಳಗದ ವಾರಪತ್ರಿಕೆ, ಸುಧಾಪತ್ರಿಕೆಯ ಸಹಸಂಪಾದಕಿಯಾಗಿದ್ದರು, ಕೆಲವು ಕಾಲ ಗ್ರಿಂಡ್ಲೆಸ್ ಬ್ಯಾಂಕ್ನಲ್ಲಿ ಹಾಗೂ ಯುನೆಸ್ಕೋದಲ್ಲಿ ಸೇವೆ ಸಲ್ಲಿಸಿದ್ದ ಅವರು ವಿಜಯಾಟೈಮ್ಸ್ ನಲ್ಲಿಯೂ ಉದ್ಯೋಗಿಯಾಗಿದ್ದರು.
ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ವಿಭಿನ್ನ ಬರಹವಣಿಗೆಯ ಮೂಲಕ ಗುರುತಿಸಿಕೊಂಡಿದ್ದ ಅವರು ‘ಅವ್ಯಕ್ತ’, ‘ಪರದೇಶಿ’, ‘ವರ್ತುಲ’, ಬಂದಳಿಕೆ, ಚಿಂಪಿ, ಸರ್ವ ಋತುಗಳೂ ನಿನಗಾಗಿ, ಅಂಕುರ ಸೇರಿದಂತೆ ಹಲವು ಕಥೆ, ಕವನ, ಕಾದಂಬರಿಗಳನ್ನು ಬರೆದಿದ್ದಾರೆ. ಅವರ ಸಾಹಿತ್ಯ ಸಾಧನೆಗಾಗಿ ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ, ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ, ಹಿರಿಯ ನಾಗರಿಕರ ಸಾಹಿತ್ಯ ಪ್ರಶಸ್ತಿ, ಬಸವ ಸಾಹಿತ್ಯ ಕಲಾವೇದಿಕೆಯ ಬಸವಜ್ಯೋತಿ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಸಂದಿವೆ.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.