Date: 01-05-2024
Location: ಬೆಂಗಳೂರು
ಹೊಸ್ತೋಟ ಮಂಜುನಾಥ ಭಾಗವತರ ಬಗ್ಗೆ ಬರೆದಿರುವ ‘ಯಕ್ಷಹಂಸ’ ಕೃತಿ ಲೋಕಾರ್ಪಣೆ ಸಮಾರಂಭವು ದಿನಾಂಕ 2024 ಏಪ್ರಿಲ್ 30, ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಶಿರಸಿದ ಸುಪ್ರಿಯಾ ಸಭಾಂಗಣದಲ್ಲಿ ನೆರವೇರಿತು.
ಯಕ್ಷಗಾನಕ್ಕಾಗಿ ಬದುಕನ್ನೇ ಮೀಸಲಿಟ್ಟು ಕಲಾಕ್ಷೇತ್ರಕ್ಕೆ ಕೊಡುಗೆ ನೀಡಿದ ಹೊಸ್ತೋಟ ಮಂಜುನಾಥ ಭಾಗವತರ ಕಲಾಬದುಕಿನ ಕುರಿತ ಈ ಗ್ರಂಥದ ಪ್ರಧಾನ ಸಂಪಾದಕಿ ವಿಜಯನಳಿನಿ ರಮೇಶ, ಮಾರ್ಗದರ್ಶಕ ಎಂ. ಪ್ರಭಾಕರ ಜೋಶಿ, ನೀನಾಸಂ ಮುಖ್ಯಸ್ಥ ಕೆ.ವಿ.ಅಕ್ಷರ, ಹಿರಿಯ ಕಲಾವಿದ ಗೋಡೆ ನಾರಾಯಣ ಹೆಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ನಾಲ್ಕು ವಿಭಾಗ ಮತ್ತು 520 ಪುಟಗಳುಳ್ಳ ಕೃತಿಯಲ್ಲಿ ಒಟ್ಟು 76 ಲೇಖನಗಳಿವೆ. ಭಾಗವತರ ಸಂಶೋಧನಾತ್ಮಕ ಮತ್ತು ತಾತ್ವಿಕತೆಗೆ ಸಂಬಂಧಿಸಿದ ಕಾರ್ಯಗಳ ಕುರಿತು ವಿಶ್ಲೇಷಣೆ, ಹಳೆಯ ವಿಷಯಗಳನ್ನು ಹೊಸ ರೀತಿಯಲ್ಲಿ ವ್ಯಕ್ತಪಡಿಸಿದ ಪ್ರಸಂಗ ಗುಚ್ಛಗಳ ಪರಾಮರ್ಶೆ, ಯಕ್ಷಗಾನ ವಿಸ್ತರಣೆಯ ಚಿತ್ರಣವಿದೆ. ಭಾಗವತರ ಒಡನಾಡಿಗಳು, ಅಭಿಮಾನಿಗಳು, ಶಿಷ್ಯವೃಂದ, ಕಲಾಕ್ಷೇತ್ರದ ಸಹವರ್ತಿಗಳ ಬರಹಗಳು ಈ ಗ್ರಂಥದಲ್ಲಿ ಸಂಕಲನಗೊಂಡಿವೆ.
ಬೆಂಗಳೂರು: ಯಾವ ಯಾವ ಘಟನೆಗಳು ಪುಟ್ಟಪ್ಪ ಅವರನ್ನ ಕುವೆಂಪುವಾಗಿ ರೂಪಿಸಿತು, ಕುವೆಂಪು ಒಬ್ಬ ದಾರ್ಶನಿಕ ಬರಹಗಾರರಾಗಿದ್ದು...
ಮಾಧವಿ ಭಂಡಾರಿ ಕೆರೆಕೋಣ ಇವರಿಗೆ 'ನವಲಕಲ್ ಬೃಹನ್ಮಠ ಶಾಂತವೀರಮ್ಮ'ಮಹಾತಾಯಿ ಕಥಾ ಪ್ರಶಸ್ತಿ' ಉತ್ತರ ಕ...
ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿಯಲ್ಲಿ ದಿನಾಂಕ 2024 ಮೇ 19ರ ಭಾನುವಾರದಂದು ಜಿ.ಟಿ.ಭಟ್ಟರ 80ರ ಸಂಭ್ರಮದ ಜೊತೆಗೆ ಅವರ ...
©2024 Book Brahma Private Limited.