ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ: ವೈದೇಹಿ

Date: 01-12-2019

Location: ಶಿವಮೊಗ್ಗ


’ಇಂದು ಹೆಣ್ಣುಮಕ್ಕಳು ಬದುಕುವುದು ಕಷ್ಟವಾಗುತ್ತಿದೆ. ಅವರ ಮೇಲಿನ ದೌರ್ಜನ್ಯ, ಅತ್ಯಾಚಾರ, ಕೊಲೆಗಳು ಹೆಚ್ಚಾಗುತ್ತಿವೆ. ಇದರಿಂದ ಎಷ್ಟೋ ಹೆಣ್ಣುಮಕ್ಕಳು ಹೆಣ್ಣುಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಹಿಂದೆ ಇಂತಹ ಪ್ರಕರಣಗಳು ಆದರೂ ತಿಳಿಯುತ್ತಿರಲಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ' ಎಂದು ಸಾಹಿತಿ ವೈದೇಹಿ ಅಭಿಪ್ರಾಯಪಟ್ಟರು.

ಭಾನುವಾರ ನಗರದ ಪತ್ರಿಕಾ ಭವನದಲ್ಲಿ ವೈದೇಹಿ ಗೌರವ ಗ್ರಂಥ ಸಮಿತಿ ಮತ್ತು ಸಂಪಾದಕರ ಮಂಡಳಿಯಿಂದ ಹಮ್ಮಿಕೊಂಡಿದ್ದ ಸಾಹಿತಿ ವೈದೇಹಿ ಅವರಿಗೆ ‘ಇರುವಂತಿಗೆ’ ಗೌರವ ಗ್ರಂಥ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚಿಂತಕ ಲಕ್ಷ್ಮೀಶ ತೋಳ್ಪಾಡಿ, ‘ಸ್ತ್ರೀ ಪ್ರಜ್ಞೆ ಮತ್ತು ಸಾಂಸಾರಿಕತೆ ನಡುವಿನ ಸಂಬಂಧ ಬೆಸೆಯಲು ವೈದೇಹಿ ಅವರ ಬರಹಗಳೇ ಮೂಲ ಪ್ರೇರಣೆಯಾಗಿವೆ. ಸ್ತ್ರೀ ಪ್ರಜ್ಞೆ ಎಂಬುದು ವೈದೇಹಿ ಅವರಿಂದ ಮೊದಲ ಬಾರಿಗೆ ಪ್ರಚಲಿತಕ್ಕೆ ಬಂದಿದೆ. ಸಂಸ್ಕಾರ ಬಿಟ್ಟು ಅಂತರಂಗದ ಪ್ರಪಂಚವನ್ನು ಬರಹಗಳಲ್ಲಿ ತೆರದಿಟ್ಟಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

ಲೇಖಕಿ ಸವಿತಾ ನಾಗಭೂಷಣ, ಗೀತಾ ವಸಂತ ಉಪಸ್ಥಿತರಿದ್ದರು.

MORE NEWS

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...