Date: 26-05-2023
Location: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಪ್ರಗತಿಪರ ರೈತರಿಗೆ ನೀಡುವ ʻಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿ ಪ್ರಕಟಿಸಿದೆ. 2022ನೆಯ ಸಾಲಿನ ಪ್ರಸ್ತುತ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಪ್ರಗತಿಪರ ಕೃಷಿಕ ಕೆ. ಎಸ್ ಸೋಮಶೇಖರ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ಸಮಾಜ ಸೇವಕರಾದ ಡಾ. ಚಿಕ್ಕಕೊಮಾರಿಗೌಡ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿಶೇಷ ದತ್ತಿನಿಧಿ ಸ್ಥಾಪಿಸಿದ್ದಾರೆ. ಉತ್ತಮ ಸಾಧನೆಮಾಡಿದ ಪ್ರಗತಿಪರ ರೈತರಿಗೆ, ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನಲ್ಲಿ ಪಂಚಾಯತ್ ರಾಜ್ಯ ವ್ಯವಸ್ಥೆ ಬಗ್ಗೆ ಉತ್ತಮ ಕೆಲಸ ಮಾಡಿರುವ ಸಂಸ್ಥೆಗಳಿಗೆ, ಉತ್ತಮ ಜನಪ್ರತಿನಿಧಿಗಳಿಗೆ ಮತ್ತು ತಜ್ಞರುಗಳನ್ನು ಗುರುತಿಸಿ ವರ್ಷಕ್ಕೊಬ್ಬರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಪ್ರಶಸ್ತಿಯು 10,000( ಹತ್ತು ಸಾವಿರ)ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ಒಳಗೊಂಡಿರುತ್ತದೆ.
ಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷತೆ ವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ ಜೋಶಿ ಮಾತನಾಡಿ ಪರಿಷತ್ತು ಸಾಧಕರಿಗೆ ಹುಡುಕಿಕೊಂಡು ಹೋಗಿ ಪ್ರಶಸ್ತಿ ನೀಡುತ್ತದೆ. ನಮ್ಮ ನಾಡು ಋಷಿ ಸಂಸ್ಕೃತಿಯನ್ನು ಹೊಂದಿದೆ. ಈ ಸಂಸ್ಕೃತಿ ನಿಂತಿದ್ದೇ ಕೃಷಿ ಸಂಸ್ಕೃತಿಯ ಆಧಾರದ ಮೇಲೆ ಆದ್ದರಿಂದ ರೈತರು ದೇವರಿಗೆ ಸರಿಸಮನಾರು. ಈ ಮಾತನ್ನು ಗುರು ಗೋವಿಂದಭಟ್ಟರು, ಶಿಶುನಾಳ ಶರೀಫರು ಪುಷ್ಟೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಗತಿಪರ ರೈತರಿಗೆ ಕೊಡುವ ಈ ಪ್ರಶಸ್ತಿಯು ಕನ್ನಡ ಸಾಹಿತ್ಯ ಪರಿಷತ್ತಿನ ಹೆಮ್ಮೆಯ ಪ್ರಶಸ್ತಿಗಳ ಪೈಕಿ ಇದು ಒಂದಾಗಿದೆ ಎಂದು ಹೇಳಿದ್ದಾರೆ.
ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿ ದಾನಿಗಳಾದ ಡಾ. ಚಿಕ್ಕಕೊಮಾರಿಗೌಡ, ಶ್ರೀ ಸಿ. ಕೆ. ರಾಮೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ, ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.
ಹುಬ್ಬಳ್ಳಿ: ನಾಡಿನ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಪ್ರತಿಷ್ಠಾಪನೆಗೊಂಡ ಡಾ. ಸಂಗಮೇಶ ಹಂಡಿಗಿ ಸ...
ಬೆಂಗಳೂರು: ಜ್ಯೋತಿ ನಿವಾಸ್ ಕಾಲೇಜು ಸ್ವಾಯತ್ತದಿಂದ ಕನ್ನಡ ಗೆಳೆಯರ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಕನ್ನಡ ...
ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನವು ರಾಜ್ಯಮಟ್ಟದ ಪ್ರೊ. ಎಚ್.ಟಿ.ಪೋತೆ ಕಾವ್ಯ, ಕಥಾ ಪ್ರಶಸ್ತಿ ನೀಡಲು...
©2024 Book Brahma Private Limited.