ದಂಡೆ ದಂಪತಿಗೆ ಎಂ.ಎಂ. ಕಲಬುರ್ಗಿ ಪ್ರಶಸ್ತಿ

Date: 12-11-2019

Location: ಬೀದರ್‌


ಬೀದರ್‌: ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ನೀಡುವ ಡಾ. ಎಂ.ಎಂ ಕಲಬುರ್ಗಿ ಪ್ರಶಸ್ತಿಗೆ ಡಾ. ವೀರಣ್ಣ ದಂಡೆ ಮತ್ತು ಡಾ. ಜಯಶ್ರೀ ದಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಳಿಯ ಅಧ್ಯಕ್ಷರಾದ ಬಸವಲಿಂಗ ಪಟ್ಟದೇವರು ತಿಳಿಸಿದ್ದಾರೆ.

ನವೆಂಬರ್‌ 23 ಮತ್ತು 24ರಂದು ಬಸವ ಕಲ್ಯಾಣದಲ್ಲಿ ನಡೆಯುವ 40ನೇ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟದಲ್ಲ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದಿದ್ದಾರೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಶರಣ ಸಾಹಿತ್ಯ ತಲಸ್ಪರ್ಶಿಯಾಗಿ ಅಧ್ಯಯನ ಮಾಡಿರುವ ಜಯಶ್ರೀ ದಂಡೆಯವರು ವಚನಕಾರರ ಬದುಕು-ಬೋಧನೆಗಳ ಬಗ್ಗೆ ಬರವಣಿಗೆ ಮಾಡಿದ್ದಾರೆ. ’ವಚನಗಳಲ್ಲಿ ಶೈವ ಹಾಗೂ ವೀರಶೈವ’ (ಸಂಶೋಧನೆ), ’ಸ್ವಭಾವದ ವಚನಗಳು’ (ಕಾವ್ಯ), ”ವಚನಕಾರ್ತಿ ರಾಯಮ್ಮ, ಅಕ್ಕಮಹಾದೇವಿ, ಚೆನ್ನಬಸವಣ್ಣ, ಆಯ್ದಕ್ಕಿ ಲಕ್ಕಮ್ಮ, ಶಿಶುನಾಳ ಶರೀಫ ಸಾಹೇಬ, ಹಡಪದ ಲಿಂಗಮ್ಮ, ಚೆನ್ನಬಸವಣ್ಣ, ಗಣೇಶ ಮಸಣಯ್ಯ, ಮುಕ್ತಾಯಕ್ಕ, ಸಿದ್ದರಾಮ” (ಜೀವನ ಚರಿತ್ರೆ), “ಶರಣರ ಆರ್ಥಿಕ ಚಿಂತನೆ, ಶರಣ ಜೀವನ, ವಚನಗಳಲ್ಲಿ ಲಿಂಗವಂತ ಭಾಗ 1, ಭಾಗ 2, ಹೂವ ತಂದವರು” (ವಿಮರ್ಶೆ), ಫಲದೊಳಗಣ ರುಚಿ, ಬೆಡಗಿನ ವಚನಗಳ ಪಾರಿಭಾಷಾ ಕೋಶ, ಹಾಲತೊರೆ, ಶರಣ ತತ್ವ ಗಳು, ಬಸವನ ಬಾಗೇವಾಡಿ ಮಂಗಳವೇಡೆ” ಇವರ ಪ್ರಮುಖ ಕೃತಿಗಳು.

ಜಾನಪದ ತಜ್ಞ, ಸಂಶೋಧಕ ವೀರಣ್ಣ ದಂಡೆಯ ಜನಪದ ಕಾವ್ಯ ಮೀಮಾಂಸೆ, ಕನ್ನಡ ಜಾನಪದ ಪ್ರಜ್ಞೆ, ಜನಪದ ಕಾವ್ಯ, ಜನಪದ ಸಾಹಿತ್ಯ ಸಿದ್ಧಾಂತ, ಹಾಲು ಮತ ಪುರಾಣ ಮುಂತಾದ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಜಾನಪದ ಸಂಶೋಧನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...