Date: 29-06-2020
Location: ಬೆಂಗಳೂರು
ಕನ್ನಡ ಪರ ಹೋರಾಟಗಾರ ಬಿ.ಎನ್. ಅಚ್ಚಪ್ಪ ಅವರಿಗೆ ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಅವರು "ಕನ್ನಡ ಸಾಹಿತ್ಯ ಪರಿಷತ್ತಿನ 106 ವರ್ಷಗಳಲ್ಲಿ ಅನೇಕ ದತ್ತಿ ಪ್ರಶಸ್ತಿಗಳನ್ನು ನೀಡಿದೆ. ಅವೆಲ್ಲವನ್ನು ಅತ್ಯಂತ ಅರ್ಹರಿಗೆ ನೀಡಲಾಗಿದೆ. ಕಳೆದ 60 ವರ್ಷಗಳಿಂದ ಕನ್ನಡಪರ ಹೋರಾಟಗಳನ್ನು ನಡೆಸುತ್ತಿರುವ, ಅ.ನ.ಕೃ., ಮ. ರಾಮಮೂರ್ತಿ, ವಾಟಾಳ್ ನಾಗರಾಜ್ ಮುಂತಾದವರೊಡನೆ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸುತ್ತಿರುವ ಬಿ.ಎನ್. ಅಚ್ಚಪ್ಪ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿರುವುದು ಸಂತಸ ತಂದಿದೆ. ಇಂಥ ದಿಟ್ಟ ಹೋರಾಟಗಾರರಿಗೆ ಗೌರವಿಸುವುದರ ಮೂಲಕ ನಾವು ನಮ್ಮ ಗೌರವವನ್ನು ಹೆಚ್ಚಿಸಿಕೊಂಡಂತಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬಿ.ಎನ್. ಅಚ್ಚಪ್ಪ, "ಕನ್ನಡ ಚಳವಳಿ ಪ್ರಾರಂಭವಾದದ್ದು 1961-62ರಲ್ಲಿ. ಚಳವಳಿ ಪ್ರಾರಂಭವಾಗುವ ಕೆಲವ ವರ್ಷಗಳ ಮುಂಚೆಯೇ ಕಬ್ಬನಪೇಟೆಯಲ್ಲಿ ಕನ್ನಡ ಸಂಘ ಸ್ಥಾಪಿಸಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಮ. ರಾಮಮೂರ್ತಿ ಅವರೊಂದಿಗೆ ಅನೇಕ ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಅವರು ಇನ್ನೂ ಕೆಲವು ವರ್ಷಗಳ ಕಾಲ ಬದುಕಿದ್ದರೆ ಕನ್ನಡಕ್ಕೆ ಇನ್ನೂ ಹೆಚ್ಚಿನ ಅನುಕೂಲವಾಗುತ್ತಿತ್ತು" ಎಂದು ನೆನಪಿಸಿಕೊಂಡರು.
ವ.ಚ. ಚನ್ನೇಗೌಡ, ರಾಜಶೇಖರ ಹತಗುಂದಿ, ಪದ್ಮರಾಜ ದಂಡಾವತಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.