Date: 18-10-2019
Location: ಕಾಂತಾವರ
ಕಾಂತಾವರ ಕನ್ನಡ ಸಂಘದಿಂದ ನ.1, 2 ರಂದು ಕಾಂತಾವರ ಉತ್ಸವದಲ್ಲಿ ನೀಡುವ ಐದು ದತ್ತಿನಿಧಿ ಪ್ರಶಸ್ತಿಗಳಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ರಮಾಕಾಂತ ಜೋಶಿ, ಡಾ. ಎಸ್. ಆರ್. ವಿಘ್ನರಾಜ, ಪುಟ್ಟು ಕುಲಕರ್ಣಿ, ಪುಣಿಂಚಿತ್ತಾಯ, ಶಾರಧಾ ಭಟ್ ಆಯ್ಕೆಯಾಗಿದ್ಧಾರೆ.
ಪ್ರಶಸ್ತಿಗಳು ತಲಾ 12 ಸಾವಿರ ರೂ. ನಗದು, ತಾಮ್ರ ಪತ್ರ ಮತ್ತು ಸನ್ಮಾನ ಒಳಗೊಂಡಿದೆ. ನ.1ರಂದು ಅಪರಾಹ್ನ 3ಕ್ಕೆ ಕಾಂತಾವರ ಕನ್ನಡ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡುವರು. ಸಂಘದ ಕಾರ್ಯಾಧ್ಯಕ್ಷ ನಿರಂಜನ ಮೊಗಸಾಲೆ ಅಧ್ಯಕ್ಷತೆಯಲ್ಲಿ ಪ್ರಶಸ್ತಿಗೆ ಸಾಧಕರ ಆಯ್ಕೆ ನಡೆದಿದೆ ಎಂದು ಪ್ರ.ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.