Date: 12-10-2021
Location: ಬೆಂಗಳೂರು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ತನ್ನ ದಾಸ್ತಾನಿನಲ್ಲಿ ಇರುವ ಕೆಲವು ಪುಸ್ತಕಗಳ ವಿಲೇವಾರಿಗೆ ತೀರ್ಮಾನಿಸಿದೆ. ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳು, ಗ್ರಂಥಾಲಯಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಕನ್ನಡ ಸಂಘಟನೆಗಳು ಪುಸ್ತಕಗಳನ್ನು ಪಡೆಯಬಹುದಾಗಿದೆ. ತಜ್ಞರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಲೇವಾರಿಗೆ ಲಭ್ಯವಿರುವ ಪುಸ್ತಕಗಳ ಪಟ್ಟಿಯನ್ನು ಪರಿಷತ್ತಿನ ವೆಬ್ಸೈಟ್ www. kasapa.inನಲ್ಲಿ ಪ್ರಕಟಿಸಲಾಗಿದೆ.
ಆಸಕ್ತರು ತಮಗೆ ಬೇಕಾದ ಪುಸ್ತಕಗಳ ಪಟ್ಟಿಯನ್ನು ಇ-ಮೇಲ್ ವಿಳಾಸ kannadaparishattu@gmail.com ಸಂಸ್ಥೆಯ ಲೆಟರ್ಹೆಡ್ನಲ್ಲಿ ಕಳುಹಿಸಬೇಕು. ಆಯ್ಕೆ ಮಾಡಿದ ಪುಸ್ತಕಗಳನ್ನು ತಮ್ಮ ಖರ್ಚಿನಲ್ಲಿಯೇ ತೆಗೆದುಕೊಂಡು ಹೋಗಬೇಕು ಎಂದು ಪರಿಷತ್ತಿನ ಆಡಳಿತಾಧಿಕಾರಿ ಎಸ್. ರಂಗಪ್ಪ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಅಂಭು ಪ್ರಕಾಶನದಿಂದ ಬೇಸಿಗೆ ರಜಾ- ಸಖತ್ ಮಜಾ ‘ಹಾಡಿನ ಬಂಡಿ ಸ್ಪರ್ಧೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ...
ಬಾಗಲಕೋಟೆ: ಸಾಹಿತಿ ಡಾ.ಪ್ರಕಾಶ ಗ.ಖಾಡೆ ಅವರ ‘ಬಾಳುಕುನ ಪುರಾಣ’ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್...
ʻಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼ ರೂ. 2 ಲಕ್ಷ 69 ಸ...
©2024 Book Brahma Private Limited.