‘ಕಥೆಯೊಳಗೆ ಕಥೆ’ ಹೇಳುವ ತಂತ್ರವನ್ನು ಈ ಕಾದಂಬರಿಯಲ್ಲೂ ಬಳಸಿಕೊಳ್ಳಲಾಗಿದೆ


'ಪರರ ಮೋಜಿಗಾಗಿ ಪ್ರಾಣ ಕಳೆದುಕೊಂಡು ಪ್ರತೀಕಾರದ ಜಿದ್ದಿಗೆ ಬಿದ್ದ ಆತ್ಮದ ಕತೆ ಇದು. ಈ ಕಾದಂಬರಿ ಹಾರರ್ ಜಾನರ್‌ಗೆ ಸಲ್ಲುತ್ತದೆಯಾದರೂ ಇಲ್ಲಿ ಪ್ರೀತಿ, ಸ್ನೇಹ, ತಾಯಿ ಮಮತೆ, ಕನಸು, ಪಶ್ಚಾತ್ತಾಪ ಎಲ್ಲವೂ ಇದೆ' ಎನ್ನುತ್ತಾರೆ ಧೀರಜ್ ಪೊಯ್ಯೆಕಂಡ. ಅವರು ತಮ್ಮ ಹೊಸ ಕಾದಂಬರಿ ಆತ್ಮಕತೆಗೆ ಬರೆದ ಲೇಖಕರ ಮಾತು ನಿಮ್ಮ ಓದಿಗಾಗಿ. 

ನಮ್ಮ ಹುಟ್ಟು ನಮ್ಮ ಕೈಯಲ್ಲಿಲ್ಲ. ಬಹುತೇಕ ಸಂದರ್ಭಕ್ಕೆ ನಮ್ಮ ಸಾವು ಕೂಡ ನಮ್ಮ ಕೈಯಲ್ಲಿಲ್ಲ. ಮೋಡಗಳೆರಡರ ಕದನ ಗುಡುಗು ಮಿಂಚಿನ ರೂಪದಲ್ಲಿ ಪ್ರಾಣಿ-ಪಕ್ಷಿಗಳ ಪ್ರಾಣ ತೆಗೆಯಬಹುದು. ಶಿಲಾಪದರಗಳ ನಡುವಿನ ಘರ್ಷಣೆ ಭೂಕಂಪದ ರೂಪದಲ್ಲಿ ಊರಿಗೆ ಊರನ್ನೇ ಆಪೋಷಣೆ ತೆಗೆದುಕೊಳ್ಳಬಹುದು. ಚಾಲಕರಿಬ್ಬರ ನಡುವಿನ ಪೈಪೋಟಿ ಪ್ರಯಾಣಿಕರನ್ನು ಬಲಿ ತೆಗೆದುಕೊಳ್ಳಬಹುದು. ಆಡಳಿತ ಪಕ್ಷ ಮತ್ತು ವಿಪಕ್ಷಗಳ ರಾಜಕೀಯ ಸಂಘರ್ಷ ಪ್ರಜೆಗಳ ಸಾವಿಗೆ ಕಾರಣವಾಗಬಹುದು. ಹೀಗೆ ಅಕಾಲಿಕ ಮರಣಕ್ಕೆ ಕಾರಣ ನಾವೇ ಆಗಬೇಕೆಂದಿಲ್ಲ. ಯಾರದ್ದೋ ಸ್ವಾರ್ಥಕ್ಕೆ, ಯಾರದ್ದೋ ಜಿದ್ದಿಗೆ, ಇನ್ಯಾರದ್ದೋ ಸಂಘರ್ಷಕ್ಕೆ ತಣ್ಣಗೆ ತನ್ನ ಪಾಡಿಗೆ ತಾನು ಬದುಕುತ್ತಿದ್ದವನು ಪ್ರಾಣ ಕಳೆದುಕೊಳ್ಳುತ್ತಾನೆ. ಒಂದರ ಮೇಲೊಂದು ಶ್ರಮದ ಕಲ್ಲು ಇಡುತ್ತಾ, ಭವ್ಯ ಭವಿಷ್ಯಕ್ಕೆ ಬುನಾದಿ ಹಾಕುತ್ತಾ, ಇನ್ನೇನು ಸಾಧನೆಯ ಹಾದಿಯಲ್ಲಿ ಹೆಜ್ಜೆ ಇಟ್ಟೆ ಅನ್ನುವಾಗ ಸಾವು ನಿರ್ದಾಕ್ಷಿಣ್ಯವಾಗಿ ತನ್ನ ಮಡಿಲಿಗೆ ಎಳೆದುಕೊಳ್ಳುತ್ತದೆ. ಅಷ್ಟಕ್ಕೂ ಈ ಸಾವು ಬರುವುದು ಶರೀರಕ್ಕೆ ತಾನೆ?. ಈ ಶರೀರವನ್ನು ನಡೆಸುವ ಚೈತನ್ಯ ಇದೆಯಲ್ಲ... ಅದೇ ಆತ್ಮ. ಅವಿನಾಶಿ ಆತ್ಮ... ಅದಕ್ಕೆ ಸಾವಿಲ್ಲವಲ್ಲ.! 

ಆತ್ಮ ಅಂತ ಯಾವುದಕ್ಕೆ ಹೇಳುತ್ತಾರೆ? ಆತ್ಮ ಎಂದರೆ ನಾನು ಎನ್ನುವ ಭಾವನೆ ಅನ್ನುತ್ತಾರೆ ಕೆಲವರು. ಒಂದು ಸಲ ಯೋಚನೆ ಮಾಡಿ ನೋಡಿ. ಹುಟ್ಟು- ಸಾವಿಲ್ಲದ, ಬಾಲ್ಯ, ಕೌಮಾರ್ಯ, ಯೌವ್ವನ, ವಾರ್ಧಕಾವಸ್ಥೆಗಳಿಲ್ಲ “ಆತ್ಮ” ಶರೀರದಿಂದ ಮುಕ್ತಗೊಂಡ ಮೇಲೆಯೂ, ಆ “ನಾನು” ಎನ್ನುವ ಭಾವನೆಯಿಂದ ಮುಕ್ತಗೊಳ್ಳದಿದ್ದರೆ, ಮನುಷ್ಯ ಸಹಜವಾದ ಅರಿಷಡ್ವರ್ಗಗಳನ್ನು ಹಾಗೆಯೇ ಉಳಿಸಿಕೊಂಡರೆ, ತನ್ನ ಶರೀರದ ಸಾವಿಗೆ ಕಾರಣರಾದವರ ಸಾವನ್ನು ಕಾಣುವ ಹಪಾಹಪಿಗೆ ಬಿದ್ದುಬಿಟ್ಟರೆ ಏನಾಗಬಹುದು? ಬಹುಶಃ ಮನುಷ್ಯ ಇನ್ನೊಂದು ಜೀವವನ್ನು ತೆಗೆಯುವ ಯೋಚನೆಯನ್ನೂ ಮಾಡುವುದಿಲ್ಲ. ‘ಆತ್ಮಕತೆ’ಯ ಕತೆಯೂ ಇದೇ. ತಾನೇನೂ ಮಾಡದಿದ್ದರೂ, ಪರರ ಮೋಜಿಗಾಗಿ ಪ್ರಾಣ ಕಳೆದುಕೊಂಡು ಪ್ರತೀಕಾರದ ಜಿದ್ದಿಗೆ ಬಿದ್ದ ಆತ್ಮದ ಕತೆ ಇದು. ಈ ಕಾದಂಬರಿ ಹಾರರ್ ಜಾನರ್‌ಗೆ ಸಲ್ಲುತ್ತದೆಯಾದರೂ ಇಲ್ಲಿ ಪ್ರೀತಿ, ಸ್ನೇಹ, ತಾಯಿ ಮಮತೆ, ಕನಸು, ಪಶ್ಚಾತ್ತಾಪ ಎಲ್ಲವೂ ಇದೆ. “ಕಥೆಯೊಳಗೆ ಕಥೆ” ಹೇಳುವ ತಂತ್ರವನ್ನು ಈ ಕಾದಂಬರಿಯಲ್ಲೂ ಬಳಸಿಕೊಳ್ಳಲಾಗಿದೆ.

MORE FEATURES

Shree Venkateshwara suprabhatha; ಕೃತಿ ಆಕೃತಿಯಲ್ಲಿ ಕಿರಿದಾದರೂ ಆಶಯದಲ್ಲಿ ಹಿರಿದಾದದ್ದು

13-01-2025 ಬೆಂಗಳೂರು

“ಮಿತ್ರರಾದ ಶ್ರೀ ರಾಮಮೂರ್ತಿಯವರು ಸುಪ್ರಭಾತ ಪಠ್ಯದ ಅರ್ಥ- ಆಶಯಗಳನ್ನು ಕನ್ನಡಿಗರೆಲ್ಲರೂ ತಿಳಿಯಬೇಕೆನ್ನುವ ಉದ್ದ...

Jaathri; ಈ ಇಳಿವಯಸ್ಸಿನಲ್ಲೂ ಸೃಜನಶೀಲತೆ ಬತ್ತದ ಸೆಲೆಯಾಗಿದೆ

13-01-2025 ಬೆಂಗಳೂರು

“ಈ ಕಥನದ ಶಕ್ತಿ ಇರುವುದು ಅದರ ಆಡುನುಡಿಯಲ್ಲಿ, ಉತ್ತರ ಕರ್ನಾಟಕದ ಗ್ರಾಮೀಣ ಭಾಷೆ ಇಲ್ಲಿ ಜೀವಂತವಾಗಿದೆ. ಈ ಭಾಷೆಗ...

Kaju biscuit; ಎಲ್ಲ ಕಥೆಗಳೂ ಮನುಷ್ಯನ ಆಳ ಮನಸ್ಸಿಗೆ ಹಿಡಿದ ಕನ್ನಡಿಗಳಂಥವು

12-01-2025 ಬೆಂಗಳೂರು

"'ಕಾಜೂ ಬಿಸ್ಕೆಟ್' ನಲ್ಲಿನ ಬಹುತೇಕ ಎಲ್ಲ ಕಥೆಗಳೂ ಮನುಷ್ಯನ ಆಳ ಮನಸ್ಸಿಗೆ ಹಿಡಿದ ಕನ್ನಡಿಗಳಂಥವು. ತಲೆಕ...