Date: 20-11-2019
Location: ಹುಬ್ಬಳ್ಳಿ
ಬೆಳಗಾವಿಯ ಕವಿ ಡಾ.ಲಕ್ಷ್ಮಣ ವಿ.ಎ. ಅವರ "ಅಪ್ಪನ ಅಂಗಿ" ಕವನ ಸಂಕಲನದ ಹಸ್ತಪ್ರತಿಗೆ 2019ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿ ಲಭಿಸಿದೆ. 10 ಸಾವಿರ ರೂ. ಹಾಗೂ ಫಲಕವನ್ನು ಪ್ರಶಸ್ತಿಯು ಒಳಗೊಂಡಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಡಾ. ಲಕ್ಷ್ಮಣ ವಿ.ಎ., ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೋಳೆ ಗ್ರಾಮದವರು. 1977 ರಲ್ಲಿ ಜನನ. ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಮೋಳೆಯಲ್ಲೇ ಪೂರೈಸಿದ್ದು, ಧಾರವಾಡದ ಕರ್ನಾಟಕ ವಿಜ್ಞಾನ ಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿದ ನಂತರ ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ ಪಡೆದರು. ಮೈಸೂರು ವಿ.ವಿ.ದಿಂದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಹಾಗೂ ತುಮಕೂರಿನ ಕೊರಟಗೆರೆಯಲ್ಲಿ" ಡಿಪ್ಲೋಮಾ ಇನ್ ಫಾರ್ಮಸಿ’ ಪಡೆದರು. 'ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ' ಇವರ ಪ್ರಥಮ ಕವನ ಸಂಕಲನವಾಗಿದ್ದು, ಕಣವಿ ಕಾವ್ಯ ಪ್ರಶಸ್ತಿ ಹಾಗೂ ಮುಂಬೈ ನೇಸರು ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದೆ.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.