Date: 21-11-2025
Location: ಬಿಡದಿ
ಬಿಡದಿ: ಬಾಷ್ ಸಂಸ್ಥೆಯ ಮೈಕೋ ಕನ್ನಡ ಬಳಗವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ಸ್ಮಾರಕ ಪ್ರಶಸ್ತಿಗೆ ಮೈಸೂರಿನ ಲೇಖಕಿ ಎಸ್. ಎಲ್.ವರಲಕ್ಷ್ಮೀಮಂಜುನಾಥ್ ಹಾಗೂ ಸಂಶೋಧಕ ಎನ್. ಚಿನ್ನಸ್ವಾಮಿ ಸೋಸಲೆ ಅವರು 'ರೆ.ಫ.ಕಿಟ್ಟಲ್' ಪ್ರಶಸ್ತಿಗಳಿಗೆ ಭಾಜನರಾಗಿದ್ದು ದಿನಾಂಕ 19/11/25ರಂದು ಬಾಷ್ ಬಿಡದಿ ಘಟಕದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಗೌಡರು ಹಾಗೂ ಬಾಷ್ ಗ್ಲೋಬಲ್ ಸಾಫ್ಟ್ ವೇರ್ ಟೆಕ್ನಾಲಜೀಸ್ ನ ಅಧ್ಯಕ್ಷರಾದ ದತ್ತಾತ್ರಿ ಸಾಲಗಾಮೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿಗಳು ತಲಾ 10 ಸಾವಿರ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ಒಳಗೊಂಡಿದೆ.ಕಾರ್ಯಕ್ರಮದಲ್ಲಿ ಮೈಕೋ ಕನ್ನಡ ಬಳಗದ ಗೌರವಾಧ್ಯಕ್ಷರಾದ ಪದ್ಮಿನಿ ನಾಗರಾಜು ಹಾಗೂ ಅಧ್ಯಕ್ಷರಾದ ಶ್ರೀರಾಮತೀರ್ಥ, ವಿಶೇಷ ಆಹ್ವಾನಿತರಾಗಿದ್ದ ಪದ್ಮಶ್ರೀ ಪುರಸ್ಕೃತರಾದ ರಾಜಣ್ಣ ಹಾಗೂ ಬಳಗದ ಸದಸ್ಯರು,ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...
ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...
ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...
©2025 Book Brahma Private Limited.