ಲೇಖಿಕಾ ಸಾಹಿತ್ಯ ವೇದಿಕೆಯ ‘ವಾಣಿ ಕೌಟುಂಬಿಕ ಕಥಾ ಸ್ಪರ್ಧೆ’ ಫಲಿತಾಂಶ ಪ್ರಕಟ

Date: 07-05-2024

Location: ಬೆಂಗಳೂರು


ಬೆಂಗಳೂರು: ಲೇಖಿಕಾ ಸಾಹಿತ್ಯ ವೇದಿಕೆ- ಹಿರಿಯ ಲೇಖಕಿ ವಾಣಿಯವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ `ವಾಣಿ ಕೌಟುಂಬಿಕ ಕಥಾ ಸ್ಪರ್ಧೆ' ಫಲಿತಾಂಶವು ಪ್ರಕಟಗೊಂಡಿದೆ.

ಪ್ರಥಮ ಬಹುಮಾನವನ್ನು ಬೆಂಗಳೂರಿನ ರಾಧಿಕ ಗುಜ್ಜರ್ ಪಡೆದುಕೊಂಡಿದ್ದು, ಪ್ರಶಸ್ತಿಯು 1,000 ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ದ್ವಿತೀಯ ಬಹುಮಾನಕ್ಕೆ ಮೈಸೂರಿನ ಸುಚಿತ್ರಾ ಹೆಗಡೆ ಭಾಜನರಾಗಿದ್ದು, ಪ್ರಶಸ್ತಿಯು 750 ರೂ.ನಗದು ಮತ್ತು ಪ್ರಶಸ್ತಿ ಪತ್ರ, ತೃತೀಯ ಬಹುಮಾನವನ್ನು ಹುಬ್ಬಳ್ಳಿಯ ಲತಾ ಹೆಗಡೆ ಪಡೆದುಕೊಂಡಿದ್ದು, ಪ್ರಶಸ್ತಿಯು 500 ರೂ. ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಮೆಚ್ಚುಗೆ ಬಹುಮಾನವನ್ನು ಮಂಗಳೂರಿನ ಜ್ಯೋತಿ ರಾಜೇಶ್, ಬೆಳಗಾವಿಯ ನೀತಾರಾವ್, ಬೆಂಗಳೂರಿನ ಎನ್. ಶಂಕರ ರಾವ್ ಹಾಗೂ ಕುಂದಾಪುರದ ನಾಗವೇಣಿ ಶೇಖರ ಅವರು ಪಡೆದುಕೊಂಡಿದ್ದಾರೆ.

ಕಥಾಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅನಿವಾಸಿ ಕನ್ನಡಿಗರಾದ ಯುಎಸ್.ಎ ಯ ಸಾವಿತ್ರಿತಾವ್(ಕ್ಲೀವ್ ಲ್ಯಾಂಡ್), ಹಾಗೂ ಲಂಡನ್ ನ ಡಾ. ಪ್ರೇಮಲತಾ ಬಿ ಅವರಿಗೆ ಅಮೆಝಾನ್ ಗಿಫ್ಟ್ ಕಾರ್ಡ್ ಬಹುಮಾನವನ್ನು ನೀಡಲಾಗುತ್ತಿದೆ.

ಬೆಂಗಳೂರಿನ ಪ್ರೊ.ಎಲ್. ಗಿರಿಜಾ ರಾವ್, ಯುಎಸ್.ಎ ದೀಪಾರಾವ್‌(ಓಹಿಯೋ) ಅವರು ಕಥಾಸ್ಪರ್ಧೆಯ ತೀರ್ಪುಗಾರರಾಗಿದ್ದರು.

ಕಥಾಸ್ಪರ್ಧೆಯ ಬಹುಮಾನವನ್ನು ಮೇ. 29 ಬುಧವಾರದಂದು ವಿತರಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕಿ ಲೇಖಿಕಾ ಸಾಹಿತ್ಯ ವೇದಿಕೆಯ ಶೈಲಜಾ ಸುರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

MORE NEWS

ಬರವಣಿಗೆಗೆ ಅನುಭವ ಎಷ್ಟು ಮುಖ್ಯವೋ ಅಧ್ಯಯನವೂ ಅಷ್ಟೇ ಮುಖ್ಯ: ಬರಗೂರು ರಾಮಚಂದ್ರಪ್ಪ

18-05-2024 ಬೆಂಗಳೂರು

ಬೆಂಗಳೂರು: ಇಲ್ಲಿ ಬಿಡುಗಡೆಗೊಂಡ ಮೂರು ಪುಸ್ತಕಗಳು ವಿಭಿನ್ನ ವಿಚಾರಗಳನ್ನು ಒಳಗೊಂಡಿದ್ದರೂ, ಅವೆಲ್ಲವೂ ಸಾಮಾಜಿಕ ಕಾಳಜಿಯ...

ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿನಿಧಿ ರಾಜ್ಯ ಪ್ರಶಸ್ತಿಗಳಿಗೆ ಆಹ್ವಾನ 

18-05-2024 ಬೆಂಗಳೂರು

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2023ನೇ ಸಾಲಿನಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಕನ್ನಡ ಸಾಹಿತ್ಯ ಪರಿ...

ಅನುಪಮಾ ನಿರಂಜನ ಅವರ ಬಗ್ಗೆ ಓದಿ ತಿಳಿದುಕೊಳ್ಳುವುದು ಬಹಳಷ್ಟಿದೆ; ಎಚ್.ಎಲ್. ಪುಷ್ಟ

17-05-2024 ಬೆಂಗಳೂರು

ಬೆಂಗಳೂರು: ಕನ್ನಡ ಸಂಘರ್ಷ ಸಮಿತಿಯಿಂದ ಡಾ. ಅನುಪಮಾ ನಿರಂಜನ ಹುಟ್ಟು ಹಬ್ಬದ ಪ್ರಯುಕ್ತ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯ ...