ಮಣಿಕಂಠ ಗೊದಮನಿ ಗೆ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಬಹುಮಾನ


೨೦೨೫ ನೇ ಸಾಲಿನ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಬಹುಮಾನವು ಮಣಿಕಂಠ ಗೊದಮನಿ ಯವರ 'ನೇಣು' ಎಂಬ ಕಥೆಯ ಹಸ್ತಪ್ರತಿಗೆ ದೊರೆತಿದೆ. 'ಈ ಕಥೆಯು ಸಮಾಜದಾಳದಲ್ಲಿ ಇನ್ನೂ ಲಾವಾರಸದಂತೆ ಕುದಿಯುತ್ತಲೇ ಇರುವ ಜಾತೀಯತೆಯ ಭ್ರಷ್ಟ ವ್ಯವಸ್ಥೆಯು ತೀವ್ರ ಭಾವಪೂರ್ಣ ಕಥನವಾಗಿ ಸಹೃದಯರನ್ನು ಪರಿಣಾಮಕಾರಿಯಾಗಿ ತಟ್ಟುವುದರ ಮೂಲಕ ಯಶಸ್ವಿಯಾಗಿದೆ' ಎಂದು ಸ್ಪರ್ಧೆಯ ತೀರ್ಪುಗಾರರಾದ ಮಹಾಂತಪ್ಪ ನಂದೂರ ಹಾಗೂ তেত. ರಂಗನಾಥ ಕಂಟನಕುಂಟೆ ಅಭಿಪ್ರಾಯಪಟ್ಟಿದ್ದಾರೆ.

ಈ ಪುರಸ್ಕಾರವು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ. ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ಹಾಗೂ ಶ್ರೀಮತಿ ವಿಜಯಾ ಅಗಸನಕಟ್ಟೆ ಸಹಯೋಗದಲ್ಲಿ ನಡೆವ ಸತತ ಎಂಟನೇ ವರ್ಷದ ಸ್ಪರ್ಧೆಯಿದಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬರುವ ಜುಲೈ ತಿಂಗಳಲ್ಲಿ ನೆರವೇರಿಸಲಾಗುವುದು ಎಂದು ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಥೆಗಾರನ ಪರಿಚಯ:

ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಬಹುಮಾನ-೨೦೨೫ ಪಡೆದ ಮಣಿಕಂಠ ಗೊದಮನಿ ಪ್ರಸ್ತುತ ಹಾವೇರಿಯ ಗುದ್ದೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ໖.໑ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ೨೦೨೧ ರಲ್ಲಿ ಹೊರಬಂದ ಇವರ 'ಉರಿದೊಡಲ ಬೇಗೆ' ಕವನ ಸಂಕಲನಕ್ಕೆ ವಿದ್ಯಾಸಾಗರ ಬಾಲ ಪುರಸ್ಕಾರ ದೊರೆತಿದೆ. ಸುರಗಿ ಪ್ರತಿಷ್ಠಾನ ಕವನ ಸ್ಪರ್ಧೆಯಲ್ಲೂ ಬಹುಮಾನಿತರಾಗಿದ್ದಾರೆ.

MORE FEATURES

ಕನಸುಗಳ ಕಣಿವೆಯಲ್ಲಿ ಭ್ರಮೆಗಳನ್ನು ಮಾರಿದವಳು..

12-12-2025 ಬೆಂಗಳೂರು

"ಕದಡಿದ ಕೊಳವು ತಿಳಿಯಾಗಿರಲು (ಬಿಡಿ ಬರಹ, ಪ್ರಬಂಧ) ಓದಿದೆ. ಇಲ್ಲಿನ ಹೆಚ್ಚಿನ ಲೇಖನಗಳನ್ನು ನಾನು ಈ ಮೊದಲೇ ಓದಿದ್...

ಎರಡು ರಟ್ಟುಗಳ ನಡುವೆ ಏನಿದೆ, ಏನಿಲ್ಲ!

12-12-2025 ಬೆಂಗಳೂರು

"ಪುಸ್ತಕ, ಓದು ಮತ್ತು ಬರವಣಿಗೆ ಒಂದು ವರ್ಗದ ಪ್ಯಾಶನ್. ತನ್ಮಯತೆಯಿಂದ ಓದುತ್ತಾ ಕೂತ ವ್ಯಕ್ತಿ ನಮಗೆ ಯಾವತ್ತೂ ಒಂದ...

ಕಥನ ಕಾರಣ ವಿನೂತನ

11-12-2025 ಬೆಂಗಳೂರು

"ಈ ನಡುವೆ ದಶಕಗಳ ಹಿಂದೆಯೇ ಆಗೀಗ ಬರೆದಿಟ್ಟಿದ್ದ ಚೀಟಿಗಳು ಕಣ್ಣಿಗೆ ಬಿದ್ದಾಗೆಲ್ಲಾ 'ನಮ್ಮನ್ನು ಹೀಗೇ ಬಿಟ್ಟರ...