Date: 03-12-2021
Location: ಬೆಂಗಳೂರು
ಕೊಪ್ಪಳದ ಯುವ ಕವಿ ಮೆಹಬೂಬ ಮಠದ ಅವರ ಚೊಚ್ಚಲ ಕವನ ಸಂಕಲನ "ಬಿಸಿಲು ಕಾಡುವ ಪರಿ" ಯು ಬೆಳಗಾವಿಯ ಬಿ. ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 5000 ರೂಪಾಯಿ ನಗದು, ಸ್ಮರಣಿಗೆ, ಪ್ರಮಾಣ ಪತ್ರ ಹಾಗೂ ಗೌರವ ಸನ್ಮಾನವನ್ನು ಒಳಗೊಂಡಿದೆ.
ಹೊಸ ತಲೆಮಾರಿನ ಭರವಸೆಯ ಕವಿ ಎಂದು ವಿಮರ್ಶಕರು ಗುರುತಿಸಿರುವ ಮೆಹಬೂಬ ಮಠದ ಅವರು ಮಾನವೀಯ ಕಾಳಜಿಯ ಆತ್ಯಂತಿಕ ನೆಲೆಯನ್ನು ಕಾವ್ಯದ ಜೀವಾಳವಾಗಿಸಿಕೊಂಡಿದ್ದಾರೆ.
ಡಿ. 12ರಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಠದ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಎಂ. ವಾಯ್. ಮೆಣಸಿನಕಾಯಿ ಅವರು ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.