Date: 13-10-2021
Location: ಬೆಳಗಾವಿ
ಮಹಾತ್ಮರ ಚರಿತಾಮೃತ ಕೃತಿ ರಚಿಸಿದ ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರಿಗೆ ಡಾ..ಸ.ಜ.ನಾಗಲೋಟಿಮಠ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹಿರೇಮಠದ ದಸರಾ ಉತ್ಸವದ 3ನೇ ದಿನ ಶನಿವಾರ ರಾತ್ರಿ ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಗದಗಿನ ಸದಾಶಿವಾನಂದ ಸ್ವಾಮೀಜಿ ಹಾಗೂ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ಸಮ್ಮುಖದಲ್ಲಿ ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಜ್ಯ ಅರಣ್ಯ, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಮಾತನಾಡಿ, ಹುಕ್ಕೇರಿ ಹಿರೇಮಠದ ದಸರಾ ಉತ್ಸವವು ಕಳೆದ ಮೂರು ವರ್ಷಗಳಿಂದ ಸರಳವಾಗಿ ನಡೆದುಕೊಂಡು ಬಂದಿದೆ. ಆದರೆ, ಈ ವರ್ಷ ಅತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಥಣಿಯ ಸ್ವಾಮೀಜಿ ಅವರಿಗೆ ನಾಗಲೋಟ ಮಠ ಪ್ರಶಸ್ತಿ ನೀಡಿದ್ದು ಖುಷಿ ತಂದಿದೆ ಎಂದರು.
ಗದಗಿನ ಸದಾಶಿವಾನಂದ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ, ಮೈಸೂರು ದಸರಾ ನಾಡಿಗೆ ಹೆಸರಾದರೆ, ಹುಕ್ಕೇರಿ ದಸರಾ ಭಾವೈಕ್ಯತೆಗೆ ಹೆಸರಾಗಿದೆ ಎಂದರೆ, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಧರ್ಮದ ಅಧ್ಯಯನದ ಸಾರವೇ ಮಹಾತ್ಮರ ಚರಿತಾಮೃತ ಬೃಹತ್ ಕೃತಿ ಎಂದರು. ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಮಾತನಾಡಿದರು.
ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ, ಹರ್ಷಲಾ ಹನಿ ಹಾಸ್ಯ ಪ್ರದರ್ಶನ ಮಾಡಿದರು. ಅವುಜಿಕರ ಆಶ್ರಮದ ಉತ್ತರಾಧಿಕಾರಿ ಅಭಿನವ ಮಂಜುನಾಥ ಸ್ವಾಮೀಜಿ, ವಿರಕ್ತಮಠದ ಶಿವಬಸವ ಸ್ವಾಮೀಜಿ, ಇಂಪನಾ ನಾಗಲೋಟಿಮಠ, ಪುರಸಭೆ ಅಧ್ಯಕ್ಷ ಎ.ಕೆ.ಪಾಟೀಲ, ಮಹಾವೀರ ಉದ್ಯೋಗ ಸಮೂಹ ಸಂಸ್ಥೆಗಳ ಅಧ್ಯಕ್ಷ ಮಹಾವೀರ ನಿಲಜಗಿ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಶೋಕ ಪಾಟೀಲ, ಲಕ್ಷ್ಮಣ ವಾಳದ ಮತ್ತಿತರರು ಉಪಸ್ಥಿತರಿದರು.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.