Date: 02-11-2019
Location: ಚಾಮರಾಜಪೇಟೆ
64ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಿತ್ತು. ಧ್ವಜಾರೋಹಣವನ್ನು ನಾಡೋಜ, ಮನು ಬಳಿಗಾರ್ ಅವರು ನೆರವೇರಿಸಿದರು. ಧ್ವಜಾರೋಹಣದ ನಂತರ ಮಾತನಾಡಿದ ಅವರು “ನಾಡು, ನುಡಿಗಾಗಿ ಸೇವೆ ಸಲ್ಲಿಸಿದವರಿಗೆ, ಕರ್ನಾಟಕ ಏಕೀಕರಣಕ್ಕೆ ದುಡಿದವರ ಭಕ್ತಿಪೂರ್ವ ನಮನಗಳನ್ನು ಸಲ್ಲಿಸುವೆ. ಪ್ರತಿಯೊಬ್ಬರು ಕನ್ನಡದಲ್ಲೇ ಮಾತನಾಡಬೇಕು, ಕನ್ನಡದಲ್ಲೇ ವ್ಯವಹರಿಸಬೇಕು ಆ ಮೂಲಕ ನಮ್ಮ ಭಾಷೆಯನ್ನು ಬೇಳೆಸಿ ಪ್ರೀತಿಸಬೇಕು” ಎಂದರು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಜಶೇಖರ ಹತಗುಂದಿ, ಗೌರವ ಕೋಶಾಧ್ಯಕ್ಷರಾದ ಪಿ. ಮಲ್ಲಿಕಾರ್ಜನಪ್ಪ, ರಾಜ್ಯ ಸಂಚಾಲಕರಾದ ಪದ್ಮರಾಜ ದಂಡಾವತಿ, ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷರಾದ ಮಾಯಣ್ಣ, ಕನ್ನಡಪರ ಕಾರ್ಯಕರ್ತರಾದ ರಮಾದೇವಿ ವಿಶ್ವೇಶ್ವರಯ್ಯ, ನೊಣವಿನಕೆರೆ ರಾಮಕೃಷ್ಣಯ್ಯ, ಮುರಳಿಕೃಷ್ಣ ಬೆಲಾಳು ಸೇರಿದಂತೆ ಪರಿಷತ್ತಿನ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ, ಯಶಸ್ವಿಯಾಗಿ ನಡೆಸಿಕೊಟ್ಟರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.