‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಕೃತಿ ಲೋಕಾರ್ಪಣೆ

Date: 23-11-2022

Location: ಬೆಂಗಳೂರು


ಗಾಂಧೀಜಿಯ ಜೀವನ ಗಂಗೆಯಲ್ಲಿ ಮಿಂದು ಮೆರುಗು ಪಡೆದು ಪರಿವರ್ತಿತರಾಗಿ ಸಮಾಜದೊಂದಿಗೆ ಗುರುತಿಸಿಕೊಂಡು ರಚನಾತ್ಮಕವಾಗಿ ಬಾಳುತ್ತಿರುವವರನ್ನು ಕುರಿತಾದ ಸಾಹಿತ್ಯ ರಚನೆಯಾಗಿ ಗಾಂಧಿಯೋತ್ತರ ಸಾಹಿತ್ಯ ಎಂಬಂತೆ ಹೊರಬರಬೇಕಾಗಿದೆ ಎಂದು ಬಿ.ಹೆಚ್.ಎಸ್ ಉನ್ನತ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಕೆ. ಎಸ್. ಸಮೀರಸಿಂಹ ನುಡಿದರು.

ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು  ಮತ್ತು ಕರ್ನಾಟಕ ಸರ್ವೋದಯ ಮಂಡಲದ  ಸಂಯುಕ್ತಾಶ್ರಯದಲ್ಲಿ  ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ಕಾಲೇಜು ಸಭಾಂಗಣದಲ್ಲಿ ಆಯೋಜಿಲಾಗಿತ್ತು. ಈ ವೇಳೆ  ಡಾ.ಹೆಚ್.ಎಸ್.ಸುರೇಶ್ ರವರ ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ ಮಾಡಿ ಮಾತನಾಡುತ್ತ ಅಭಿಪ್ರಾಯ ವ್ಯಕ್ತಪಡಿಸಿದರು.

ತುಮಕೂರಿನ ಹಿರಿಯ ಗಾಂಧಿ ಚಿಂತಕ ಶ್ರೀ ಲ. ನರಸಿಂಹಯ್ಯ ತೊಂಡೋಟಿ ‘ವಕೀಲರಾಗಿ ಮಹಾತ್ಮ ಗಾಂಧೀಜಿ’ ಕುರಿತು ಉಪನ್ಯಾಸ ಗಾಂಧೀ ಅದೆಷ್ಟು ಪ್ರಸ್ತುತ ಮತ್ತು ಶಕ್ತಿಶಾಲಿ ಎಂದರೆ ನಮ್ಮ ಅನೇಕ ವೈಯುಕ್ತಿಕ, ಸಾಮಾಜಿಕ ವ್ಯಸನಗಳಿಗೆ ಗಾಂಧೀ ಉತ್ತರ ನೀಡಬಲ್ಲ ದೊಡ್ಡ ಶಕ್ತಿ ಎಂದು ತಿಳಿಸಿದರು. 

ಕರ್ನಾಟಕ ಸರ್ವೋದಯ ಮಂಡಲ ಅಧ್ಯಕ್ಷ ಡಾ. ಹೆಚ್. ಎಸ್. ಸುರೇಶ್ ಉತ್ತಮ ಪುಸ್ತಕವನ್ನು ಓದಿ ಅದರ ಪ್ರಭಾವಲಯಕ್ಕೆ ಒಳಗಾಗಿ, ಇನ್ನಷ್ಟು ಓದಿ ಹೆಚ್ಚು ಪ್ರಭಾವಿತರಾದವರ ಉದಾಹರಣೆಗಳಿವೆ. ಆದರೆ ವ್ಯಕ್ತಿಯ ಜೀವನ ಚರಿತ್ರೆ ಅಂದರೆ, ಆತ್ಮಕಥೆಯನ್ನು ಓದಿದ ಮಾತ್ರದಿಂದ  ಪ್ರಭಾವಿತವಾದದ್ದು ಮಾತ್ರವಲ್ಲ ಪರಿವರ್ತಿತವಾದದ್ದು ಬಹಳ ಅಪರೂಪ. ಅದರಲ್ಲೂ ವಿಚಾರಣಾಧೀನ ಖೈದಿಯಾಗಿ ಶಿಕ್ಷೆಗೂ ಪಾತ್ರನಾದ 25-30ರ ತರುಣ ಅಪರಾಧಿ ಪರಿವರ್ತಿತನಾಗಿ ಸಭ್ಯ ಜೀವನ ಮಾರ್ಗವನ್ನು ಕಂಡುಕೊAಡು ಬಾಳುತ್ತಿದ್ದಾನೆ ಎಂಬುದು ನಂಬಲೇಬೇಕಾದ ಸತ್ಯ- ಪರಮ ಸತ್ಯ. ಸ್ಥಿತ್ಯಂತರ ಗತಿಯ ಸಮಾಜದಲ್ಲಿ ಒಂದು ಜೀವಂತ ಸಾಕ್ಷಿ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಪ್ರಾಂಶುಪಾಲರು  ಕೆ.ಎಸ್. ಶೈಲಜಾ ಅಧ್ಯಕ್ಷತೆ ವಹಿಸಿದ್ದರು,  ರಾ.ಸೇ.ಯೋ ಅಧಿಕಾರಿ ಎಸ್.ಎ. ಶ್ರೀಕಂಠ , ಉಪ ಪ್ರಾಂಶುಪಾಲ ಡಾ.ಡಿ.ರಾಧಾಕೃಷ್ಣ , ಕರ್ನಾಟಕ ಸರ್ವೋದಯ ಮಂಡಲ ಕಾರ್ಯದರ್ಶಿ ಯ.ಚಿ. ದೊಡ್ಡಯ್ಯ,  ಕರ್ನಾಟಕ ಸರ್ವೋದಯ ಮಂಡಲ, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ  ಗುರುರಾಜ ಪೋಶೆಟ್ಟಿಹಳ್ಳಿ ಉಪಸ್ಥಿತರಿದ್ದರು.   
 

MORE NEWS

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...