Date: 05-04-2024
Location: ಬೆಂಗಳೂರು
ಬೆಂಗಳೂರು: ಕರ್ನಾಟಕ ಪ್ರಕಾಶಕರ ಸಂಘವು ಕೊಡ ಮಾಡುತ್ತಿರುವ 2023ನೇ ವಾರ್ಷಿಕ ಪ್ರಶಸ್ತಿಗೆ ರೂಪ ಮತ್ತೀಕೆರೆ (ನಂಜನಗೂಡು ತಿರುಮಲಾಂಭ ಪ್ರಶಸ್ತಿ) ಮತ್ತು ಮೈಸೂರಿನ ಚಿಂತನ ಚಿತ್ತಾರ ಪ್ರಕಾಶನದ ನಿಂಗರಾಜ್ ಚಿತ್ತಣ್ಣವರ್ (ಶ್ರೀ ಗೋಪಾಲ ಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿ) ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಕಂಬತ್ತಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಂಜನಗೂಡು ತಿರುಮಲಾಂಬ ಪ್ರಶಸ್ತಿ ಮತ್ತು ಶ್ರೀ ಗೋಪಾಲ ಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿಯನ್ನು ವಿಜಯಪುರದಲ್ಲಿ ಪುಸ್ತಕ ಸಂಸ್ಕೃತಿಯಲ್ಲಿ ತೊಡಗಿಕೊಂಡಿರುವ ಪುಸ್ತಕ ಪ್ರೀತಿ ಬಳಗದ ರೂಪ ಮತ್ತಿಕೆರೆ ಅವರನ್ನು, ಶ್ರೀ ಗೋಪಾಲ ಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿಯನ್ನು ಮೈಸೂರಿನ ಚಿಂತನ ಚಿತ್ತಾರ ಪ್ರಕಾಶನ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಮಳಿಗೆಯ ನಿಂಗರಾಜ ಚಿತ್ತಣ್ಣ ಅವರನ್ನು ಆಯ್ಕೆಮಾಡಲಾಗಿದೆ.
ಪ್ರಶಸ್ತಿಯನ್ನು 2024 ಏಪ್ರಿಲ್ 23 ಮಂಗಳವಾರ ವಿಶ್ವ ಪುಸ್ತಕ ದಿನದಂದು ಬೆಂಗಳೂರಿನ ಬಿ ಎಂಶ್ರೀ ಪ್ರತಿಷ್ಠಾನದ ಎಂ. ವಿ. ಸಿ .ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು. ಮುಖ್ಯ ಅತಿಥಿಗಳಾಗಿ ಎನ್ ಗಣೇಶಯ್ಯ ಸಾಂಸ್ಕೃತಿಕ ಚಿಂತಕರಾದ ಎಂ ಎಸ್ ಆಶಾದೇವಿ, ಬಿ ಎಂ ಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಭೈರಮಂಗಲರಾಮೇಗೌಡ ಅವರು ಭಾಗವಹಿಸುವರು.
ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಕಂಬತ್ತಳ್ಳಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅಂದು ಉಚಿತ ಪುಸ್ತಕಗಳನ್ಮು ವಿತರಿಸಲಾಗುವುದು. ಆಯ್ಕೆ ಸಮಿತಿಯಲ್ಲಿ ಪ್ರಕಾಶ್ ಕಂಬತ್ತಳ್ಳಿ ಡಾ ವಸುಂಧರಾ ಭೂಪತಿ, ಕಾರ್ಯದರ್ಶಿ ನ. ರವಿಕುಮಾರ್, ಜಂಟಿ ಕಾರ್ಯದರ್ಶಿ ಸೃಷ್ಠಿ ನಾಗೇಶ್, ಜಿ.ಎನ್. ಮೋಹನ್, ರಮೇಶ್ ಉಡುಪ, ಕೆ ರಾಜಕುಮಾರ್, ಶ್ರೀಮತಿ ವಿಶಾಲಾಕ್ಷಿ, ಜನಾರ್ಧನ ಪೂಜಾರಿ ಮತ್ತು ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ಸೃಷ್ಟಿ ನಾಗೇಶ್ ತಿಳಿಸಿದ್ದಾರೆ.
2023ನೇ ಸಾಲಿನ ಮಾತೋಶ್ರೀ ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿಗೆ ಕಥಾಸಂಕಲನಗಳನ್ನು ಆಹ್ವಾನಿಸಲಾಗಿದೆ. &nb...
ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳಿಗಾಗಿ ಲೇಖಕಿಯರಿಂದ ಕೃತಿಗಳನ್ನು ...
ಬೆಂಗಳೂರು: ಬೆಂಗಳೂರಿನ ಬಸವ ಸಮಿತಿಯು ‘ವಿಶ್ವ ಬಸವ ಜಯಂತಿ 2024’ರ ಅಂಗವಾಗಿ ಡಾ. ಅರವಿಂದ ಜತ್ತಿ ಮಾರ್ಗದರ...
©2024 Book Brahma Private Limited.