ಸು.ರಂ.ಎಕ್ಕುಂಡಿ ಜನ್ಮಶತಮಾನೋತ್ಸವ ಕಾವ್ಯ ಪ್ರಶಸ್ತಿ - 2023

Date: 26-03-2023

Location: ಬೆಂಗಳೂರು


ಕವಿ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ವತಿಯಿಂದ ನೀಡಲಾಗುತ್ತಿರುವ 'ಸು.ರಂ.ಎಕ್ಕುಂಡಿ ಜನ್ಮಶತಮಾನೋತ್ಸವ ಕಾವ್ಯ ಪ್ರಶಸ್ತಿಯು ಪ್ರಕಟಗೊಂಡಿದೆ.

ವಾಸುದೇವ ನಾಡಿಗರ 'ಬಂದರಿಗೆ ಬಂದ ಹಡಗು' ಮತ್ತು ರತ್ನಾಕರ ಕುನುಗೋಡರ 'ಎದೆನೆಲದ ಕಾವು' ಕವನಸಂಕಲನಗಳು ಆಯ್ಕೆಯಾಗಿವೆ. ಸಂಕೇತ ಪಾಟೀಲ, ಸುಭಾಷ್ ಪಟ್ಟಾಜೆ ಮತ್ತು ರವಿಶಂಕರ್ ಜಿ. ಕೆ. ತೀರ್ಪುಗಾರರಾಗಿದ್ದರು.

ಎಪ್ರಿಲ್ 16, ರಂದು ಧಾರವಾಡದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲೇಖಕರಾದ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿ ರೂ. 5000/- ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥ ವಿಕಾಸ ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೇಖಕ ವಾಸುದೇವ ನಾಡಿಗರ ಪರಿಚಯಕ್ಕಾಗಿ ಈ ಲಿಂಕ್ ಕ್ಲಿಕ್ಕಿಸಿ
ಲೇಖಕ ರತ್ನಾಕರ ಕುನುಗೋಡರ ಪರಿಚಯಕ್ಕಾಗಿ ಈ ಲಿಂಕ್ ಕ್ಲಿಕ್ಕಿಸಿ

MORE NEWS

ಸಾಹಿತ್ಯ ಕೃತಿಗಳು ಸಮಾಜದ ಹಲವು ಮುಖಗಳನ್ನು ತೋರಿಸುವ ಶಕ್ತಿ ಪಡೆದಿವೆ; ದೀಪಾ ಭಾಸ್ತಿ

13-12-2025 ಬೆಂಗಳೂರು

ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...

2026ನೇ ಸಾಲಿನ ಟೊಟೊ ಪುರಸ್ಕಾರದ ಮೊದಲನೇ ಪಟ್ಟಿ ಬಿಡುಗಡೆ

12-12-2025 ಬೆಂಗಳೂರು

2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...

ಮಕ್ಕಳಲ್ಲಿ ಕಲ್ಪನಾ ಲೋಕ ಬೆಳೆಸಿ: ಬಸು ಬೇವಿನಗಿಡದ

10-12-2025 ಧಾರವಾಡ

ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...