Date: 26-03-2023
Location: ಬೆಂಗಳೂರು
ಕವಿ ದಿ. ಸುಬ್ಬಣ್ಣ ರಂಗನಾಥ ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಪ್ರಯುಕ್ತ ಧಾರವಾಡದ ಸಾಹಿತ್ಯ ಗಂಗಾ ಮತ್ತು ಹಂಸಭಾವಿಯ ವಾರಂಬಳ್ಳಿ ಪ್ರತಿಷ್ಠಾನದ ವತಿಯಿಂದ ನೀಡಲಾಗುತ್ತಿರುವ 'ಸು.ರಂ.ಎಕ್ಕುಂಡಿ ಜನ್ಮಶತಮಾನೋತ್ಸವ ಕಾವ್ಯ ಪ್ರಶಸ್ತಿಯು ಪ್ರಕಟಗೊಂಡಿದೆ.
ವಾಸುದೇವ ನಾಡಿಗರ 'ಬಂದರಿಗೆ ಬಂದ ಹಡಗು' ಮತ್ತು ರತ್ನಾಕರ ಕುನುಗೋಡರ 'ಎದೆನೆಲದ ಕಾವು' ಕವನಸಂಕಲನಗಳು ಆಯ್ಕೆಯಾಗಿವೆ. ಸಂಕೇತ ಪಾಟೀಲ, ಸುಭಾಷ್ ಪಟ್ಟಾಜೆ ಮತ್ತು ರವಿಶಂಕರ್ ಜಿ. ಕೆ. ತೀರ್ಪುಗಾರರಾಗಿದ್ದರು.
ಎಪ್ರಿಲ್ 16, ರಂದು ಧಾರವಾಡದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲೇಖಕರಾದ ಪ್ರೊ. ರಾಘವೇಂದ್ರ ಪಾಟೀಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿ ರೂ. 5000/- ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ ಎಂದು ಸಾಹಿತ್ಯ ಗಂಗಾ ಪ್ರತಿಷ್ಠಾನದ ಮುಖ್ಯಸ್ಥ ವಿಕಾಸ ಹೊಸಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ ವಾಸುದೇವ ನಾಡಿಗರ ಪರಿಚಯಕ್ಕಾಗಿ ಈ ಲಿಂಕ್ ಕ್ಲಿಕ್ಕಿಸಿ
ಲೇಖಕ ರತ್ನಾಕರ ಕುನುಗೋಡರ ಪರಿಚಯಕ್ಕಾಗಿ ಈ ಲಿಂಕ್ ಕ್ಲಿಕ್ಕಿಸಿ
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.