Date: 13-06-2021
Location: ಬೆಂಗಳೂರು
ಭಾಷಾ ಶಾಸ್ತ್ರ ವಿದ್ವಾಂಸ, ಅಂತಾರಾಷ್ಟ್ರೀಯ ದ್ರಾವಿಡ ಭಾಷಾಶಾಸ್ತ್ರ ಸಂಸ್ಥೆಯ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರು ಭಾನುವಾರ (2021, ಜೂನ್ 13) ನಿಧನರಾದರು.
ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿಗಳೂ ಆಗಿದ್ದ ಅವರು ಧಾರವಾಡದಲ್ಲಿ ನೆಲೆಸಿದ್ದರು. ಕರ್ನಾಟಕದ ಎಲ್ಲ ಭಾಷೆಗಳ ಸಂಪೂರ್ಣ ಮಾಹಿತಿ ನೀಡುವ ಸಂಶೋಧನೆಯ ಬೃಹತ್ ಗ್ರಂಥ ಎಂದೇ ಖ್ಯಾತಿಯ ‘ಕರ್ನಾಟಕದ ಭಾಷೆಗಳು’ ಸಂಪಾದಿತ ಕೃತಿಯು ಭಾರತೀಯ ಭಾಷಾ ವಿದ್ವತ್ ವಲಯದಲ್ಲಿ ಇವರಿಗೆ ಖ್ಯಾತಿ ತಂದುಕೊಟ್ಟಿತ್ತು.
ಪೂರ್ಣಚಂದ್ರ ತೇಜಸ್ವಿ, ಮಹಾರಾಷ್ಟ್ರ ಜಾನಪದ ಇವರ ಪ್ರಮುಖ ಕೃತಿಗಳು. ಕನ್ನಡ ಭಾಷೆ, ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯ ಸೇವೆ-ಸಾಧನೆಗಾಗಿ ಅವರಿಗೆ ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಸಾಹಿತ್ಯ ಸಂಶೋಧನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...
ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...
ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...
©2024 Book Brahma Private Limited.