Date: 24-11-2022
Location: ಬೆಂಗಳೂರು
ಸಮಾಜಮುಖಿ ಕನ್ನಡ ಮಾಸಿಕ ಪತ್ರಿಕೆಯಿಂದ 2023 ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳನ್ನು ಆಹ್ವಾನಿಸಲಾಗಿದೆ. ಕಥೆಗಳು 2000 ಪದಗಳ ಮಿತಿಯಲ್ಲಿರ ಬೇಕು, ವರ್ಡ್ ಅಥವಾ ನುಡಿ/ಯುನಿಕೋಡ್ ಲಿಪಿಯಲ್ಲಿರಬೇಕು .ನಿಮ್ಮ ಹೆಸರು, ವಿಳಾಸ, ಭಾವಚಿತ್ರ, ಮೊಬೈಲ್ ಸಂಖ್ಯೆ ಪ್ರತ್ಯೇಕವಾಗಿರಬೇಕು, ಕಥೆ ಯಾವ ಮಾಧ್ಯಮದಲ್ಲೂ ಪ್ರಕಟವಾಗಿರಬಾರದು. ಆಯ್ಕೆಯಾದ ಹದಿನೈದು ಕಥೆಗಳಿಗೆ ಸಮಾಜಮುಖಿ ವಾರ್ಷಿಕ ಕಥಾ ಸಂಕಲನದಲ್ಲಿ ಸ್ಥಾನ ಸಿಗಲಿದೆ. ಹಾಗೂ ಏಪ್ರಿಲ್ 2023 ಸಮಾಜಮುಖಿ ಸಂಚಿಕೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು. 2023 ಜನವರಿ 15 ಭಾನುವಾರ ಕಥೆಕಳುಹಿಸಲು ಕೊನೆಯ ದಿನಾಂಕವಾಗಿದೆ.
ಆಯ್ಕೆಯಾದ ಐದು ಬಹುಮಾನಿತ ಕಥೆಗಳಿಗೆ ತಲಾ 5000.ರೂ ಬಹುಮಾನ ನೀಡಲಾಗುವುದು
ಕಥೆಯನ್ನು samajamukhi2017@gmail.com ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...
ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...
ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...
©2024 Book Brahma Private Limited.