Date: 03-07-2020
Location: ಬೆಂಗಳೂರು
ಕಥೆಗಾರ ಅಬ್ಬಾಸ್ ಮೇಲಿನಮನಿ ಹಾಗೂ ಸಾಹಿತಿ ಪ್ರಕಾಶ್ ಖಾಡೆ ಅವರು ತಿರುಪತಿ ಭಂಗಿ ಅವರ ‘ಕೆಂಪರೋಡ್’ ಕಥಾಸಂಕಲನವನ್ನು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಅಬ್ಬಾಸ್ ಮೇಲಿನಮನಿ ಅವರು “ರಸ್ತೆಯನ್ನು ಸಾಂಕೇತಿಕವಾಗಿ ಇಟ್ಟುಕೊಂಡು ಇಡೀ ಸಮಾಜದ ದುಸ್ತರ ವ್ಯವಸ್ಥೆಯನ್ನು ಚಿತ್ರಿಸುತ್ತಲೇ ತಮ್ಮ ಜೀವದ್ರವ್ಯವನ್ನು ಕತೆಯಾಗಿಸಿ ಸಾಮಾಜಿಕ ಸಮಸ್ಯೆಗೂ ಪರಿಹಾರವನ್ನು ಕೃತಿಯಲ್ಲಿ ನೀಡಿರುವುದು ಸಂತಸದ ವಿಷಯ” ಎಂದು ಅಭಿಪ್ರಾಯಪಟ್ಟರು.
ನಂತರ ಮಾತನಾಡಿದ ಪ್ರಕಾಶ್ ಖಾಡೆ, “ಕೊರೊನಾದ ದುರಿತ ಕಾಲದಲ್ಲಿ ನಾವಿದ್ದೇವೆ. ಜನರಲ್ಲಿ ಬೇರೂರಿರುವ ಮೌಢ್ಯತೆಯನ್ನು ವೈಜ್ಞಾನಿಕ ಪರಿಕಲ್ಪನೆಗೆ ಒಳಪಡಿಸುತ್ತಾ ನಿಧಾನವಾಗಿ ದೂರ ಮಾಡುವ ಆಶಯದ ಕತಾ ಸಂಕಲನವಿದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕೃತಿಕಾರ ತಿರುಪತಿ ಭಂಗಿ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...
ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...
©2024 Book Brahma Private Limited.