Date: 18-09-2023
Location: ಕಾಸರಗೋಡು
ಕಾಸರಗೋಡು: ಯಲ್ಲಾಪುರ ತಾಲ್ಲೂಕು ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ ಹೆಗಡೆ (ನೀರ್ನಳ್ಳಿ ಗಣಪತಿ) ಯವರಿಗೆ 2023 ನೇ ಸಾಲಿನ ‘ಉಂಡೆಮನೆ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ವ್ಯಂಗ್ಯ ಚಿತ್ರಕಲಾವಿದರಾಗಿ ಬೆಳೆದು ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ರಾಮಕಥೆಯಲ್ಲಿ ಶ್ರೀಮದ್ವಾಲ್ಮೀಕಿರಾಮಾಯಣದ "ಕುಂಚಕವಿ"ಯಾಗಿ ಅರಳಿದ ನೀರ್ನಳ್ಳಿಯವರು ಗೀತರಾಮಾಯಣದ ಸರಣಿ ಕಾರ್ಯಕ್ರಮಗಳಲ್ಲೂ 'ಗೀತ-ಕುಂಚ' ಕಲಾವಿದರಾಗಿ ಹೆಸರು ಪಡೆದಿರುತ್ತಾರೆ. ಶಂಕರಾಚಾರ್ಯರ ಸ್ತೋತ್ರ ಗಾಯನ ಸಂದರ್ಭದಲ್ಲೂ ಭಾವಕ್ಕೆ ಅನುಗುಣವಾಗಿ ಚಿತ್ರ ರಚಿಸಿ ಯಶಸ್ವಿಯಾದ ಗರಿಮೆ ಇವರದ್ದಾಗಿದೆ. ಇವರ ವ್ಯಂಗ್ಯ ಚಿತ್ರಗಳು ನಾಡಿನ ಹಲವು ಪತ್ರಿಕೆಗಳಲ್ಲಿ ನಿಯತವಾಗಿ ಪ್ರಕಟವಾಗುತ್ತಿದ್ದುದು ಅವರ ಸಮಕಾಲೀನ ಆಗುಹೋಗುಗಳ ಬಗೆಗಿರುವ ಸ್ಪಂದನೆಗೆ ಇರುವ ಸಾಕ್ಷಿಗಳಾಗಿವೆ.
ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...
2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...
ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...
©2025 Book Brahma Private Limited.