ಓ ಜ್ಞಾನಿ ಕಲಾಪ್ರೀಯ ಶಾರದಾ ವಿಲಾಸ
ಓಲೆಯಲಿ ಓದಿಸಿದ ವಿದ್ಯಾಪೀಠ ಕನ್ನಡನಾಡು ll೧೨ll
ಔತ್ಸುಕ್ಯದ ನಾಡು ನುಡಿ ನೆಲ
ಔಡುವ ಮೇಲೆ ಕನ್ನಡ ನುಡಿ ಜಾತ್ರೆ ll೧೩ll
ಸಂತೋಷ ಕಾಖಂಡಕಿ
ವಿಡಿಯೋ
ವಿಡಿಯೋ
ಸಂತೋಷ ಕಾಖಂಡಕಿ
ಕವಿ ಸಂತೋಷ ಕಾಖಂಡಕಿ ಅವರು ಮೂಲತಃ ಬಾಗಲಕೋಟೆಯ ಜಿಲ್ಲೆಯ ಬಾದಾಮಿಯವರು. ಪ್ರೌಢಶಾಲಾ ದಿನಗಳಿಂದಲೇ ಕವಿತೆ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಂಡ ಅವರು ಅನೇಕ ಪ್ರತಿಷ್ಠಿತ ಕಾವ್ಯಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ಇಪ್ಪತ್ತುಗಿಂತ ಹೆಚ್ಚು ಕಾವ್ಯನಾಮದ ಚುಟುಕು, ಅಂಕಿತನಾಮದಿಂದ ಐದು ವಚನಗಳು ,ಇನ್ನೂರುಕ್ಕೂ ಹೆಚ್ಚು ಕವಿತೆಗಳು ,ಐದು ಕತೆಗಳು ರಚಿಸಿದ್ದಾರೆ. ಅವರು ಪ್ರಸ್ತುತ ಪುಲಿಕೇಶಿ ಆರ್ಯವೇದಿಕ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದಾರೆ. ಬರವಣಿಗೆ ಹಾಗೂ ಓದು ಅವರ ಆಸಕ್ತಿ ಕ್ಷೇತ್ರವಾಗಿದೆ.
ಪ್ರಶಸ್ತಿಗಳು: ರಾಷ್ಟ್ರೀಯ ರಾಜ್ಯೋತ್ಸವ ಪ್ರಶಸ್ತಿ, ಸಾಧಕ ರತ್ನ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ