Story/Poem

ಎಚ್.ಎಸ್. ಸತ್ಯನಾರಾಯಣ

ಕನ್ನಡ ಪ್ರಾಧ್ಯಾಪಕರು ಹಾಗೂ ಹೊಸ ತಲೆಮಾರಿನ ವಿಮರ್ಶಕರೂ ಆದ ಎಚ್.ಎಸ್. ಸತ್ಯನಾರಾಯಣ ಅವರು ಮೂಲತಃ ಮಲೆನಾಡಿನವರು. ಕುವೆಂಪು ಅವರ ಕುಪ್ಪಳಿಗೆ ಸಮೀಪವೇ ಇರುವ, ಚಿಕ್ಕಮಗಳೂರಿನ ಹೊಕ್ಕಳಿಕೆಯಲ್ಲಿ ಜನಿಸಿದ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಚಿರಪರಿತರು. ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸತ್ಯನಾರಾಯಣ ಅವರು ಅನೇಕ ಸಾಹಿತಿಗಳೊಂದಿಗೆ ಒಡನಾಡಿದ್ದಾರೆ. ಆ ಬಗ್ಗೆ ಅತ್ಯಂತ ಆಕರ್ಷಕವಾಗಿ ಮಾತನಾಡುವ ಅವರು ಅಷ್ಟೇ ಆಕರ್ಷಕವಾಗಿ ಬರೆಯುತ್ತಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಗಾಗಿ ‘ಕನ್ನಡ ಸಾಹಿತ್ಯ ಸಂಗಾತಿ’, ‘ಸಾಹಿತ್ಯ ವಿಮರ್ಶೆ-2016’, ಜೊತೆಗೆ ಡುಂಡಿರಾಜರ ಸಾಹಿತ್ಯ ವಿಮರ್ಶೆ ಕುರಿತ ‘ಡುಂಡಿಮಲ್ಲಿಗೆ’, ದ್ವಿತೀಯ ಪಿ.ಯು.ಸಿ.ಯ ಕನ್ನಡ ಭಾಷಾ ಪಠ್ಯ ‘ಸಾಹಿತ್ಯ ಸಂಪದ’ವನ್ನು ಸಂಪಾದಿಸಿದ್ದಾರೆ. ಕುವೆಂಪು ಕುರಿತು ಅವರು ಅಲ್ಲಲ್ಲಿ ಮಾಡಿದ ಭಾಷಣಗಳಿಗೆ ಬರಹ ರೂಪ ನೀಡಿ ‘ಕುವೆಂಪು- ಅಲಕ್ಷಿತರೆದೆಯ ದೀಪ’ ಹಾಗೂ ಕವಿಸಮಯ-ಅಂಕಣ ಬರಹಗಳ ಸಂಕಲನ ‘ಅಪೂರ್ವ ಒಡನಾಟ’ ಪ್ರಕಟಗೊಂಡಿವೆ.

More About Author

Story/Poem

ಎಡ-ಬಲ ಮೀಮಾಂಸೆ

ಬಿಸಿನೀರ ಸುಡು ಹೊಗೆ ಧಗೆ ಎಡದಿಂದ ನಲ್ಲಿಯಲ್ಲಿ ಹೊಟೇಲಿನ ಹುಡುಗ ನಸುನಗುತ್ತ ತೋರಿದ ತಣ್ಣೀರಿನಂತಿದ್ದರೂ ಒಳಗೇ ಬಿಸಿಯ ಹೊಗೆಯಡಗಿಸಿದ ನಲ್ಲಿಯಂತಿತ್ತು ಅವನ ಮೊಗ ಅದೇಕೆ ಎಡಕ್ಕೇ ಬಿಸಿ ಬಲಕ್ಕೇ ತಂಪು? ಅದೇನೋ ಗೊತ್ತಿಲ್ಲ ಮನುಷ್ಯನ ನಿಯಮ ಅದಲು ಬದಲಾಗುವುದು ಒಮ್ಮೊಮ್ಮ...

Read More...