Story/Poem

ಲಕ್ಷ್ಮಣ ಬಾದಾಮಿ

ಲಕ್ಷ್ಮಣ ಬಾದಾಮಿ ಅವರ ಮೂಲ ಹೆಸರು ಲಕ್ಷ್ಮಣ ತುಕಾರಾಮ ಬಾದಾಮಿ. ಇವರು ಮೂಲತಃ ಬಾಗಲಕೋಟ ಜಿಲ್ಲೆ ಸಿರೂರು ಗ್ರಾಮದವರು. ಕಲಾ ವಿಭಾಗದಲ್ಲಿ ಎಂ.ಎಫ್.ಎ., ಎ.ಎಂ., ಜಿ.ಡಿ.(ಆರ್ಟ್) ಪೂರ್ಣಗೊಳಿಸಿದ್ದು, 2008ರಿಂದ ಸರಕಾರಿ ಪ್ರೌಢಶಾಲೆ ಕುರುಕುಂದದಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಕಲೆ ಹಾಗೂ ಸಾಹಿತ್ಯ ವೇದಿಕೆ, ಸಿರೂರದ ಮೂಲಕ ಕಳೆದ 15 ವರ್ಷಗಳಿಂದ ಸಾಹಿತ್ಯ, ಜಾನಪದ ಕಲೆಗಳ ಪುನರುತ್ಥಾನಕ್ಕಾಗಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದ್ದಾರೆ. ಕಲೆಯೊಂದಿಗೆ ಸಾಹಿತ್ಯದತ್ತರು ಆಸಕ್ತಿಹೊಂದಿರುವ ಅವರ ‘ಭವ’, ‘ಬೇರು ಮತ್ತು ಬೆವರು’, ‘ಒಂದು ಚಿಟಿಕೆ ಮಣ್ಣು’ ಎಂಬ ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ. ‘ಮನುಷ್ಯರು ಬೇಕಾಗಿದ್ದಾರೆ’ ಅವರ ಪ್ರಕಟಿತ ಕವನ ಸಂಕಲನ. ‘ರೂಪ ನಿರೂಪ’ ಪೇಂಟಿಂಗ್ಸ್ ಗಳ ಕುರಿತ ಕೃತಿಯಾಗಿದೆ. ‘ಬಿಸಿಲ ಸೀಮೆಯ ಜಾನಪದ ಸಿರಿ’ ಅವರ ಸಂಪಾದಿತ ಕೃತಿ. ಅವರ ‘ಬೇರು ಮತ್ತು ಬೆವರು’ ಕೃತಿಗೆ ಬೇಂದ್ರೆ ಗ್ರಂಥ ಬಹುಮಾನ, ‘ಒಂದು ಚಿಟಿಕೆ ಮಣ್ಣು’ ಕಥೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಚಿನ್ನದ ಪದಕ ದೊರೆತಿದ್ದು, ಇದೇ ಶೀರ್ಷಿಕೆಯ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2019ನೇ ಸಾಲಿನ ಅತ್ಯುತ್ತಮ ಕೃತಿ ಬಹುಮಾನ ದೊರೆತಿದೆ. 

More About Author

Story/Poem

ಮರಳಿ ಮಣ್ಣಿನೆಡೆಗೆ 

ದೇಶದಲ್ಲಿ ಈಗ ಆರ್ಥಿಕ ಬಿಕ್ಕಟ್ಟು ಕಾಣಿಸಿಕೊಂಡಿದೆ. ಹಾಗೆ ನೋಡಿದರೆ ಸಿರಿಪುರಕ್ಕೆ 15-20 ವರ್ಷಗಳ ಹಿಂದೆಯೇ ಭಾಳ ಜೋರಾದ ಆರ್ಥಿಕ ಹೊಡೆತ ಬಿದ್ದಿತ್ತು. ಸಿರಿಪುರದ ಸೀರೆಗಳು ಮತ್ತು ಇಲ್ಲಿ ತಯಾರಾಗುವ ಚಕ್ಕಡಿಗಳು ಲೋಕಪ್ರಸಿದ್ಧಿಯನ್ನು ಪಡೆದಿದ್ದವು. ಕೈಮಗ್ಗದಲ್ಲಿ ಇಲ್ಲಿನ ಕುಶಲ ನೇಕಾರರಿಂದ ...

Read More...

ಕವಿಗೆ ಹಾಳೆಗಳು ಸಿಗುತ್ತಿಲ್ಲ 

ಗಾಳಿ ನಿಂತಿದೆ ಹೊರಗೆ ಫ್ಯಾನು ತಿರುಗುತಿದೆ ಒಳಗೆ ಮೈಯೊಳಗೆಲ್ಲ ಇಬ್ಬನಿ ಸಂಚಾರ ತಲೆಮೇಲೆ ತಟತಟ ಮಳೆಹನಿ ಅಂಗಾಲ ಕೆಳಗೆ ಬೆಂಕಿ ಬಿಸಿಲು ಹಿತ್ತಲ ಗಿಡಗಳು ಬೋಳುಬೋಳು ಅಂಗಳದಲ್ಲಿ ನೆರೆಯೋ ನೆರೆ ಚಳಿ ತಾಳದೆ ನಡುಗುತಿದೆ ನಡು ಮನೆಯ ಕಂಬ   ಕೇದಗೆಯ ಬನದ ಹಾ...

Read More...