ಕೆ. ಶಿವಲಿಂಗಪ್ಪ ಹಂದಿಹಾಳು
ಮಕ್ಕಳ ಕತೆಗಳ ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ಲೇಖಕ, ಶಿಕ್ಷಕರಾದ ಕೆ. ಶಿವಲಿಂಗಪ್ಪ ಹಂದಿಹಾಳು. ವೃತ್ತಿಯಲ್ಲಿ ಶಿಕ್ಷಕರಾಗಿರುವ ಇವರು ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ನಾನು ಮತ್ತು ಕನ್ನಡಕ, ಎಳೆಬಿಸಿಲು, ಶಾವೋಲಿನ್, ಆನಂದಾವಲೋಕನ, ಬಳ್ಳಾರಿಯ ಬೆಡಗು ಮುಂತಾದವು ಇವರ ಪ್ರಮುಖ ಕೃತಿಗಳು.