ಕಪಿಲ ಪಿ. ಹುಮನಾಬಾದೆ
ಯುವ ಬರಹಗಾರ ಕಪಿಲ ಪಿ ಹುಮನಾಬಾದೆ ಅವರು ಮೂಲತಃ ಬೀದರ್ ನವರು. 1996 ಜನವರಿ 25ರಂದು ಜನನ. 2019 ನೇ ಸಾಲಿನ ವಿಜಯಕರ್ನಾಟಕ ಯುಗಾದಿ ಕಥಾಸ್ಪರ್ಧೆಯ ಟಾಪ್ 25 ಕಥೆಗಳಲ್ಲಿ ಇವರ ಬಾಗಿಲು ಎಂಬ ಸಣ್ಣಕಥೆ ಆಯ್ಕೆಯಾಗಿದೆ. ಸದ್ಯ ಕಾವ್ಯಮನೆ ಪ್ರಕಾಶನ ಬಳ್ಳಾರಿ, ಮುಖ್ಯ ಸಂಚಾಲಕರಾಗಿ ಕಾರ್ಯ ನಿರ್ವೈಸುತ್ತಿದ್ದಾರೆ. ಈಗ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಎಂ.ಎ ಎರಡನೇ ವರ್ಷದ ವಿದ್ಯಾರ್ಥಿ.