ಕೆ.ಬಿ.ವೀರಲಿಂಗನಗೌಡ್ರ
ಸಾಹಿತ್ಯ ಚಿತ್ರಕಲೆಯಲ್ಲಿ ಅಪಾರ ಆಸಕ್ತಿ ಹೊಂದಿರುವ ಕೆ.ಬಿ.ವೀರಲಿಂಗನಗೌಡ್ರ ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರದವರು. ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(ಶಿರ್ಸಿ) ಪಟ್ಟಣದಲ್ಲಿ ಚಿತ್ರಕಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೆಗಳಲ್ಲಿ ಅವರ ಕತೆ, ಕವಿತೆ, ಲೇಖನಗಳು ಪ್ರಕಟವಾಗಿವೆ. ‘ಅರಿವಿನ ಹರಿಗೋಲು’ ಅವರ ಮೊದಲ ಕವನ ಸಂಕಲನ.