ಎಲ್. ಸಿ. ಸುಮಿತ್ರ
ಜನಪ್ರಿಯ ಲೇಖಕಿ ಸುಮಿತ್ರ ಅವರು ಹುಟ್ಟಿದ್ದು ತೀರ್ಥಹಳ್ಳಿ ತಾಲ್ಲೂಕಿನ ಲಕ್ಷ್ಮೀಪುರ. ತಾಯಿ ಹೊನ್ನಮ್ಮ, ತಂದೆ ಎಲ್.ಚಂದ್ರಪ್ಪಗೌಡ. ಸಾಹಿತ್ಯದಲ್ಲಿ ಸ್ನಾತಕೋತ್ತರ ಪಡೆದಿದ್ದು, ಅಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಕುಲದ ದಾರಿ (ಕಾವ್ಯ), ಪಿಂಜರ್(ಕಾದಂಬರಿ ಅನುವಾದ), ನಿರುಕ್ತ(ವಿಮರ್ಶೆ), ಗುಬ್ಬಿ ಹಳ್ಳದ ಸಾಕ್ಷಿಯಲ್ಲಿ(ಕಥಾ ಸಂಕಲನ), ಹೂ ಹಸಿರಿನ ಮಾತು ಇವು ಸುಮಿತ್ರ ಅವರ ಪ್ರಮುಖ ಕೃತಿಗಳಾಗಿವೆ.