ಎಂ. ಜಿ. ದೇಶಪಾಂಡೆ
ಎಂ. ಜಿ. ದೇಶಪಾಂಡೆ ಎಂದೆ ಪರಿಚಿತರಾದ ಮಾಣಿಕರಾವ್ ಗೋವಿಂದರಾವ್ ದೇಶಪಾಂಡೆ ಮೂಲತಃ ಸಹಕಾರ ಕೇಂದ್ರ ಬ್ಯಾಂಕಿನ ಅಧಿಕಾರಿಯಾಗಿ ನಿವೃತ್ತಿಯಾಗಿದ್ದಾರೆ. ಕಾದಂಬರಿ, ಕಥಾ ಸಂಕಲನ, ಕವನ ಸಂಕಲನ, ನಾಟಕ, ಸೇರಿದಂತೆ 53 ಕೃತಿಗಳನ್ನು ಬರೆದಿದ್ದಾರೆ. ಕನ್ನಡಾಂಬೆ ಮತ್ತು ಖ್ಯಾತಿ ಕನ್ನಡಾಂಬೆ ವಾರ ಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ಅವರು ’ಬೀದರ ಜಿಲ್ಲಾ ಲೇಖಕರ ಬಳಗ, ಜ್ಞಾನ ತರಂಗ ವಿಚಾರ ವೇದಿಕೆ ಮುತ್ತಂಗಿ' ಮುಂತಾದ ಸಂಘ ಸಂಸ್ಥೆಗಳ ರೂವಾರಿಯಾಗಿದ್ದಾರೆ.