ಪ್ರಸನ್ನ ಸಂತೇಕಡೂರು
ಪ್ರಸನ್ನ ಸಂತೇಕಡೂರು ಸಮಕಾಲೀನ ಕನ್ನಡ ಕಥೆಗಾರ ಹಾಗೂ ವಿಜ್ಞಾನಿ. ಇವರು ಮೂಲತಃ ಶಿವಮೊಗ್ಗ ಸಮೀಪದ ಸಂತೇಕಡೂರಿನವರು. ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಜೈವಿಕ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ವಿಜ್ಞಾನದ ಜೊತೆಗೆ ಸಾಹಿತ್ಯದಲ್ಲಿಯೂ ಕೂಡ ಅಪಾರವಾದ ಆಸಕ್ತಿ ಹೊಂದಿದ್ದಾರೆ. ಇತ್ತೀಚೆಗೆ ಇವರು "ಮಾಯಾಪಂಜರ" ಮತ್ತು "ಎತ್ತಣ ಅಲ್ಲಮ ಎತ್ತಣ ರಮಣ?" ಎರಡು ಕೃತಿಗಳನ್ನು ಹೊರತಂದಿದ್ದಾರೆ.