ರಹಮತ್ ತರೀಕೆರೆ
ರಹಮತ್ ತರೀಕೆರೆ ಸಂಸ್ಕೃತಿ ಚಿಂತಕರು ಹಾಗೂ ವಿಮರ್ಶಕರು. ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಹಾಗೂ ಭಾಷಾಕಾಯದ ಡೀನ್ ಆಗಿ ಅವರು ಸೇವೆ ಸಲ್ಲಿಸಿದವರು.ಕನ್ನಡ ಸಾಹಿತ್ಯಕ್ಕೆ ಅನೇಕ ಸಂಶೋಧನಾ ಮತ್ತು ವಿಮರ್ಶಾ ಲಹರಿಯನ್ನು ಹತ್ತಿಸಿದವರು. ಜನಪದ ಕುರಿತಾದ ಚಿಂತನೆ, ಸಂಸ್ಕೃತಿ ಚಿಂತನೆಗಳೆರಡೂ ಇವರ ಸಾಹಿತ್ಯ ಕೃಷಿಯಲ್ಲಿ ನಿರಂತರವಾಗಿ ಸಾಗುತ್ತದೆ.