ರಾಜೇಂದ್ರ ಪ್ರಸಾದ್
ಕವಿ ರಾಜೇಂದ್ರ ಪ್ರಸಾದ್ತ ತ್ವಶಾಸ್ತ್ರ, ಕರ್ನಾಟಕ ಸಂಗೀತ, ಝೆನ್ ಪೇಟಿಂಗ್, ಬೌದ್ಧಮತ ಅಧ್ಯಯನ, ಪಾಕಶಾಸ್ತ್ರದಲ್ಲಿ ಅಪಾರ ಆಸಕ್ತಿ ಹೊಂದಿರುವ ಅವರು ಕಾವ್ಯದ ಬಗ್ಗೆ ವಿಶೇಷ ಪ್ರೀತಿಯುಳ್ಳವರು.
ತುಮಕೂರು ಜಿಲ್ಲೆ ಹುಲಿಯೂರು ದುರ್ಗದ ಕೊಡವತ್ತಿಯಲ್ಲಿ ಜನಿಸಿದ ರಾಜೇಂದ್ರ ಪ್ರಸಾದ್ ಪ್ರಸ್ತುತ ಮಂಡ್ಯದಲ್ಲಿ ನೆಲೆಸಿದ್ದಾರೆ. 1987 ಮಾರ್ಚ್ 19ರಂದು ಜನನ. ಎಂ.ಕಾಂ.ಪದವೀಧರರಾದ ಅವರು ಸ್ವಂತ ಉದ್ದಿಮೆಯೊಂದನ್ನು ನಡೆಸುತ್ತಿದ್ದಾರೆ. 'ಸಂಕಥನ' ಸಾಹಿತ್ಯ ಪತ್ರಿಕೆಯ ಸಂಪಾದಕರು ಮತ್ತು ಪ್ರಕಾಶರು ಆಗಿದ್ದಾರೆ.