ಶ್ಯಾಮಲಾ ಮಾಧವ
ಲೇಖಕಿ, ಅನುವಾದಕಿ ಶ್ಯಾಮಲಾ ಮಾಧವ ಅವರು ಮಂಗಳೂರಿನವರು. ಬೆಸೆಂಟ್ ಶಾಲೆ ಹಾಗೂ ಸೇಂಟ್ ಆಗ್ನಿಸ್ ಕಾಲೇಜ್ಗಳಲ್ಲಿ ವಿದ್ಯಾಭ್ಯಾಸದ ಬಳಿಕ, ದಾಂಪತ್ಯ ನಿಮಿತ್ತ ಮುಂಬಯಿ ವಾಸ. ಮಂಗಳೂರ ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಚಿತ ಹೆಸರು. ಹನ್ನೊಂದರ ಹರೆಯದಲ್ಲಿ ಪ್ರಥಮ ರಚನೆ, “ಕಡಲಿನ ಕರೆ' ಕವನ, 'ರಾಷ್ಟಬಂಧು' ಪತ್ರಿಕೆಯಲ್ಲಿ ಪ್ರಕಟವಾಯ್ತು. ಇದುವರೆಗೆ, ನಾಡಿನ ಹೆಚ್ಚಿನೆಲ್ಲ ಪತ್ರಿಕೆಗಳಲ್ಲಿ, ಅಂತರ್ಜಾಲ ಪತ್ರಿಕೆಗಳಲ್ಲಿ ಕಥೆ, ಕವನ, ಲೇಖನ, ಅನುವಾದ ಕೃತಿಗಳು ಪ್ರಕಟಗೊಂಡಿವೆ.