ಸಿದ್ಧರಾಮ ಹೊನ್ಕಲ್
ಪ್ರಬಂಧಕಾರರಾಗಿ, ಕಥೆಗಾರರಾಗಿ, ಕವಿಯಾಗಿ ಸೃಜನಶಿಲತೆಯ ಬಹುಮುಖಿ ಆಯಾಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಸಿದ್ಧರಾಮ ಹೊನ್ಕಲ್ ಅವರು ಪ್ರಸ್ತುತ ಸಮಾಜಶಾಸ್ತ್ರ ಭೋಧಕರಾಗಿ ಕಾರ್ಯನಿರ್ವಹಿಸುತಿದ್ದಾರೆ. ಜೊತೆಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ 40 ಕೃತಿಗಳನ್ನು ರಚಿಸಿದ್ದಾರೆ. ಹೊನ್ಕಲ್ ಅವರು ಬರೆದ ಕಥೆ ಮತ್ತು ಪ್ರಬಂಧಗಳು ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಮತ್ತು ಪ್ರವಾಸ ಕಥನ ಕೊಲ್ಲಾಪುರ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪಠ್ಯವಾಗಿವೆ. ಇವರ ಪ್ರಕಟಿತ ಕೃತಿಗಳು: ಕಥೆ ಕೇಳು ಗೆಳಯ, ಬಯಲು ಬಿತ್ತನೆ, ನೆಲದ ಮರೆಯ ನಿನಾದ, ಅಂತರಂಗದ ಹನಿಗಳು, ಹೊಸ ಹಾಡು, ಬೆವರು, ನೆಲದ ನುಡಿ, ಗಾಂಧಿಯ ನಾಡಿನಲ್ಲಿ, ಪಂಚನಾದಿಗಳ ನಾಡಿನಲ್ಲಿ ಮುಂತಾದವು.