ಸುರೇಶ ಎಲ್. ರಾಜಮಾನೆ
ಸುರೇಶ ಎಲ್. ರಾಜಮಾನೆ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೋಕಿನವರು. ಸದ್ಯ ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಿಕ್ಕಂದಿನಿಂದಲು ಸಾಹಿತ್ಯದೆಡೆಗೆ ಒಲವು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಸುರೇಶ್ ಅವರು 'ಸುಡುವ ಬೆಂಕಿಯ ನಗು' ಮತ್ತು 'ಮೌನ ಯುದ್ಧ' ಎಂಬ ಎರಡು ಕವನಸಂಕಲನಗಳನ್ನು ಪ್ರಕಟಿಸಿದ್ದಾರೆ. ಪ್ರಯೋಗಶೀಲತೆಗೆ ತಮ್ಮನ್ನು ತೆರೆದುಕೊಳ್ಳುವ ಸಹೃದಯಿ.